ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾ ವಾರಿಧಿ ಅಭಿನಂದನಾ ಸಮಾರಂಭ

ವಿನಯಶ್ರೀ ವಿದ್ಯಾ ಸಂಸ್ಥೆ (ರಿ) ಸಮೂಹಗಳು ಶ್ರೀ ರಾಮ ಪ್ರೌಢಶಾಲೆ, ಎಂ.ಜಿ.ಕೆ ರವರ ಆತ್ಮೀಯ ಒಡನಾಡಿ ಬಳಗದಿಂದ ವಿದ್ಯಾ ವಾರಿಧಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕಾಡನೂರು ಕೈಮರ ಬಳಿಯ ಶ್ರೀರಾಮ ಪ್ರೌಢಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಡಾ. ಎಂ.ಗೋಪಾಲಕೃಷ್ಣಯ್ಯ ರವರ ಸಮಾಜ ಸೇವೆಯಲ್ಲಿ ತಮ್ಮ ಅಮೂಲ್ಯ ಸೇವೆಯನ್ನು ಗುರುತಿಸಿ ರಾಷ್ಟ್ರೀಯ ಮಟ್ಟದ ಸಂಸ್ಥೆ WMSI MYNISTRY OF CORPORATE AFFAIR GOVERNENT OF INDIA PH.D (HON) DOCTORATE ಹಾಗೂ CENTRAL CHRISTIAN UNIVERSITY SECRETARY OF STATE-DELAWARE (USA) ಅಂತಾರಾಷ್ಟ್ರೀಯ ಮಟ್ಟದ PH.D (HON) ಗೌರವ ಡಾಕ್ಟರೇಟ್ ಕೊಟ್ಟು ಪುರಸ್ಕರಿಸಿದ ಹಿನ್ನೆಲೆ ಡಾ. ಎಂ.ಗೋಪಾಲಕೃಷ್ಣಯ್ಯರನ್ನು ಸನ್ಮಾನಿಸಿ ಅಭಿನಂದಿಸಿದರು.

ಕಾರ್ಯಕ್ರಮ ಕುರಿತು ಮಾತನಾಡಿದ ಡಾ. ಎಂ.ಗೋಪಾಲಕೃಷ್ಣಯ್ಯ, ನಾನು ಬಡ ಕುಟುಂಬದಿಂದ ಬಂದವನು, ನಮ್ಮದು ಚನ್ನೇಗೌಡ ವಂಶ, ನನ್ನ ಸೇವೆ ಎಲ್ಲಾ ಕ್ಷೇತ್ರದಲ್ಲಿ ಇದೆ. ನಾನು ಶ್ರಮಜೀವಿಯಾಗಿ ಕೆಲಸ ಮಾಡ್ತೇನೆ. ಕೆಲಸಕ್ಕೆ ಸೇರಬೇಕಾದರೆ ತುಂಬಾ ಕಷ್ಟ ಪಟ್ಟಿದ್ದೇನೆ. ನನ್ನ ಸಂಬಂಧಿಕರು ಶಿಕ್ಷಣ ಕ್ಷೇತ್ರದಲ್ಲಿ ಇದ್ದರು. ಅವರನ್ನು ನೋಡಿ ನಾನು ಶಿಕ್ಷಕ ಆಗಬೇಕೆಂದು ಶಿಕ್ಷಕ ಆದೆ. ದಾನದಲ್ಲಿ ದೊಡ್ಡದಾನ ವಿದ್ಯಾದಾನ ಎಂದು ತಿಳಿದು. ಈ ಸ್ಥಳದಿಂದ 10 ಕಿ.ಮೀ ಅಂತರದಲ್ಲಿ ಯಾವುದೇ ಶಾಲೆ ಇಲ್ಲದ ಕಾರಣ ಈ ಜಾಗವನ್ನು ಆರಿಸಿಕೊಂಡು ಶಾಲೆಯನ್ನು ಪ್ರಾರಂಭಿಸಿದೆ. ನನ್ನ 18 ರಿಂದ 25ನೇ ವಯಸ್ಸಿನಲ್ಲಿ ಗ್ರಾಮದ ಜಾತ್ರೆ ಉತ್ಸವದಲ್ಲಿ ಆಸಕ್ತ ನಾಗರಿತಿದ್ದೆ, ವಿಧವೆ ವೇತನ ಹಾಗೂ ಇತರೆ ಸರ್ಕಾರಿ ಯೋಜನೆ ಕೊಡಿಸುವುದರಲ್ಲಿ ನಾಯಕತ್ವ ಹೊಂದಿರುತ್ತಿದ್ದೆ ಎಂದರು.

ನಮ್ಮ ಶಾಲಾ ಮಕ್ಕಳ ಪೋಷಕರಲ್ಲಿ ಶ್ರೀರಾಮ ಶಾಲೆ ಬಗ್ಗೆ ಒಳ್ಳೆ ಅಭಿಪ್ರಾಯ ಇದೆ. ಎಷ್ಟೇ ಹಣ, ಅಧಿಕಾರ, ರೂಪ ಇದ್ದರೂ ಮನುಷ್ಯನಿಗೆ ಮಾನವೀಯ ಮೌಲ್ಯ ಮುಖ್ಯ. ಹತ್ತು ದೇವಾಲಯಕ್ಕಿಂತ ಗ್ರಾಮಾಂತರದಲ್ಲಿ ಒಂದು ಉತ್ತಮ ಶಾಲೆ ಇರಬೇಕು ಎಂದು ತಮ್ಮ ಭಾವನಾತ್ಮಕ ನುಡಿಯನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಖ್ಯಾತ ವೈದ್ಯರು , ಅಧ್ಯಕ್ಷರು ವಿನಯಶ್ರೀ ವಿದ್ಯಾ ಸಂಸ್ಥೆ ಡಾ. ಆಂಜನಪ್ಪ, ಖ್ಯಾತ ವಕೀಲರು ಸಿ.ಹೆಚ್.ಹನುಮಂತರಾಯ, ಡಾ. ಗಿರೀಶ , ನಿವೃತ್ತ ಡಿ ಡಿ ಪಿ ಐ ಗಂಗಮರೇಗೌಡ, ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ರವಿಕುಮಾರ್. ಟಿ.ಕೆ, ವಿನಯಶ್ರೀ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮೀದೇವಿ ಜಿ. ಎಸ್, ಶಿಕ್ಷಕರ ವೃಂದ, ಸಿಬ್ಬಂದಿ ವರ್ಗ ಸೇರಿ ಹಲವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

2 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

3 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

4 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

4 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

8 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

15 hours ago