ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾ ವಾರಿಧಿ ಅಭಿನಂದನಾ ಸಮಾರಂಭ

ವಿನಯಶ್ರೀ ವಿದ್ಯಾ ಸಂಸ್ಥೆ (ರಿ) ಸಮೂಹಗಳು ಶ್ರೀ ರಾಮ ಪ್ರೌಢಶಾಲೆ, ಎಂ.ಜಿ.ಕೆ ರವರ ಆತ್ಮೀಯ ಒಡನಾಡಿ ಬಳಗದಿಂದ ವಿದ್ಯಾ ವಾರಿಧಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕಾಡನೂರು ಕೈಮರ ಬಳಿಯ ಶ್ರೀರಾಮ ಪ್ರೌಢಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಡಾ. ಎಂ.ಗೋಪಾಲಕೃಷ್ಣಯ್ಯ ರವರ ಸಮಾಜ ಸೇವೆಯಲ್ಲಿ ತಮ್ಮ ಅಮೂಲ್ಯ ಸೇವೆಯನ್ನು ಗುರುತಿಸಿ ರಾಷ್ಟ್ರೀಯ ಮಟ್ಟದ ಸಂಸ್ಥೆ WMSI MYNISTRY OF CORPORATE AFFAIR GOVERNENT OF INDIA PH.D (HON) DOCTORATE ಹಾಗೂ CENTRAL CHRISTIAN UNIVERSITY SECRETARY OF STATE-DELAWARE (USA) ಅಂತಾರಾಷ್ಟ್ರೀಯ ಮಟ್ಟದ PH.D (HON) ಗೌರವ ಡಾಕ್ಟರೇಟ್ ಕೊಟ್ಟು ಪುರಸ್ಕರಿಸಿದ ಹಿನ್ನೆಲೆ ಡಾ. ಎಂ.ಗೋಪಾಲಕೃಷ್ಣಯ್ಯರನ್ನು ಸನ್ಮಾನಿಸಿ ಅಭಿನಂದಿಸಿದರು.

ಕಾರ್ಯಕ್ರಮ ಕುರಿತು ಮಾತನಾಡಿದ ಡಾ. ಎಂ.ಗೋಪಾಲಕೃಷ್ಣಯ್ಯ, ನಾನು ಬಡ ಕುಟುಂಬದಿಂದ ಬಂದವನು, ನಮ್ಮದು ಚನ್ನೇಗೌಡ ವಂಶ, ನನ್ನ ಸೇವೆ ಎಲ್ಲಾ ಕ್ಷೇತ್ರದಲ್ಲಿ ಇದೆ. ನಾನು ಶ್ರಮಜೀವಿಯಾಗಿ ಕೆಲಸ ಮಾಡ್ತೇನೆ. ಕೆಲಸಕ್ಕೆ ಸೇರಬೇಕಾದರೆ ತುಂಬಾ ಕಷ್ಟ ಪಟ್ಟಿದ್ದೇನೆ. ನನ್ನ ಸಂಬಂಧಿಕರು ಶಿಕ್ಷಣ ಕ್ಷೇತ್ರದಲ್ಲಿ ಇದ್ದರು. ಅವರನ್ನು ನೋಡಿ ನಾನು ಶಿಕ್ಷಕ ಆಗಬೇಕೆಂದು ಶಿಕ್ಷಕ ಆದೆ. ದಾನದಲ್ಲಿ ದೊಡ್ಡದಾನ ವಿದ್ಯಾದಾನ ಎಂದು ತಿಳಿದು. ಈ ಸ್ಥಳದಿಂದ 10 ಕಿ.ಮೀ ಅಂತರದಲ್ಲಿ ಯಾವುದೇ ಶಾಲೆ ಇಲ್ಲದ ಕಾರಣ ಈ ಜಾಗವನ್ನು ಆರಿಸಿಕೊಂಡು ಶಾಲೆಯನ್ನು ಪ್ರಾರಂಭಿಸಿದೆ. ನನ್ನ 18 ರಿಂದ 25ನೇ ವಯಸ್ಸಿನಲ್ಲಿ ಗ್ರಾಮದ ಜಾತ್ರೆ ಉತ್ಸವದಲ್ಲಿ ಆಸಕ್ತ ನಾಗರಿತಿದ್ದೆ, ವಿಧವೆ ವೇತನ ಹಾಗೂ ಇತರೆ ಸರ್ಕಾರಿ ಯೋಜನೆ ಕೊಡಿಸುವುದರಲ್ಲಿ ನಾಯಕತ್ವ ಹೊಂದಿರುತ್ತಿದ್ದೆ ಎಂದರು.

ನಮ್ಮ ಶಾಲಾ ಮಕ್ಕಳ ಪೋಷಕರಲ್ಲಿ ಶ್ರೀರಾಮ ಶಾಲೆ ಬಗ್ಗೆ ಒಳ್ಳೆ ಅಭಿಪ್ರಾಯ ಇದೆ. ಎಷ್ಟೇ ಹಣ, ಅಧಿಕಾರ, ರೂಪ ಇದ್ದರೂ ಮನುಷ್ಯನಿಗೆ ಮಾನವೀಯ ಮೌಲ್ಯ ಮುಖ್ಯ. ಹತ್ತು ದೇವಾಲಯಕ್ಕಿಂತ ಗ್ರಾಮಾಂತರದಲ್ಲಿ ಒಂದು ಉತ್ತಮ ಶಾಲೆ ಇರಬೇಕು ಎಂದು ತಮ್ಮ ಭಾವನಾತ್ಮಕ ನುಡಿಯನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಖ್ಯಾತ ವೈದ್ಯರು , ಅಧ್ಯಕ್ಷರು ವಿನಯಶ್ರೀ ವಿದ್ಯಾ ಸಂಸ್ಥೆ ಡಾ. ಆಂಜನಪ್ಪ, ಖ್ಯಾತ ವಕೀಲರು ಸಿ.ಹೆಚ್.ಹನುಮಂತರಾಯ, ಡಾ. ಗಿರೀಶ , ನಿವೃತ್ತ ಡಿ ಡಿ ಪಿ ಐ ಗಂಗಮರೇಗೌಡ, ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ರವಿಕುಮಾರ್. ಟಿ.ಕೆ, ವಿನಯಶ್ರೀ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮೀದೇವಿ ಜಿ. ಎಸ್, ಶಿಕ್ಷಕರ ವೃಂದ, ಸಿಬ್ಬಂದಿ ವರ್ಗ ಸೇರಿ ಹಲವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

4 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

6 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

9 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago