ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾ ವಾರಿಧಿ ಅಭಿನಂದನಾ ಸಮಾರಂಭ

ವಿನಯಶ್ರೀ ವಿದ್ಯಾ ಸಂಸ್ಥೆ (ರಿ) ಸಮೂಹಗಳು ಶ್ರೀ ರಾಮ ಪ್ರೌಢಶಾಲೆ, ಎಂ.ಜಿ.ಕೆ ರವರ ಆತ್ಮೀಯ ಒಡನಾಡಿ ಬಳಗದಿಂದ ವಿದ್ಯಾ ವಾರಿಧಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕಾಡನೂರು ಕೈಮರ ಬಳಿಯ ಶ್ರೀರಾಮ ಪ್ರೌಢಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಡಾ. ಎಂ.ಗೋಪಾಲಕೃಷ್ಣಯ್ಯ ರವರ ಸಮಾಜ ಸೇವೆಯಲ್ಲಿ ತಮ್ಮ ಅಮೂಲ್ಯ ಸೇವೆಯನ್ನು ಗುರುತಿಸಿ ರಾಷ್ಟ್ರೀಯ ಮಟ್ಟದ ಸಂಸ್ಥೆ WMSI MYNISTRY OF CORPORATE AFFAIR GOVERNENT OF INDIA PH.D (HON) DOCTORATE ಹಾಗೂ CENTRAL CHRISTIAN UNIVERSITY SECRETARY OF STATE-DELAWARE (USA) ಅಂತಾರಾಷ್ಟ್ರೀಯ ಮಟ್ಟದ PH.D (HON) ಗೌರವ ಡಾಕ್ಟರೇಟ್ ಕೊಟ್ಟು ಪುರಸ್ಕರಿಸಿದ ಹಿನ್ನೆಲೆ ಡಾ. ಎಂ.ಗೋಪಾಲಕೃಷ್ಣಯ್ಯರನ್ನು ಸನ್ಮಾನಿಸಿ ಅಭಿನಂದಿಸಿದರು.

ಕಾರ್ಯಕ್ರಮ ಕುರಿತು ಮಾತನಾಡಿದ ಡಾ. ಎಂ.ಗೋಪಾಲಕೃಷ್ಣಯ್ಯ, ನಾನು ಬಡ ಕುಟುಂಬದಿಂದ ಬಂದವನು, ನಮ್ಮದು ಚನ್ನೇಗೌಡ ವಂಶ, ನನ್ನ ಸೇವೆ ಎಲ್ಲಾ ಕ್ಷೇತ್ರದಲ್ಲಿ ಇದೆ. ನಾನು ಶ್ರಮಜೀವಿಯಾಗಿ ಕೆಲಸ ಮಾಡ್ತೇನೆ. ಕೆಲಸಕ್ಕೆ ಸೇರಬೇಕಾದರೆ ತುಂಬಾ ಕಷ್ಟ ಪಟ್ಟಿದ್ದೇನೆ. ನನ್ನ ಸಂಬಂಧಿಕರು ಶಿಕ್ಷಣ ಕ್ಷೇತ್ರದಲ್ಲಿ ಇದ್ದರು. ಅವರನ್ನು ನೋಡಿ ನಾನು ಶಿಕ್ಷಕ ಆಗಬೇಕೆಂದು ಶಿಕ್ಷಕ ಆದೆ. ದಾನದಲ್ಲಿ ದೊಡ್ಡದಾನ ವಿದ್ಯಾದಾನ ಎಂದು ತಿಳಿದು. ಈ ಸ್ಥಳದಿಂದ 10 ಕಿ.ಮೀ ಅಂತರದಲ್ಲಿ ಯಾವುದೇ ಶಾಲೆ ಇಲ್ಲದ ಕಾರಣ ಈ ಜಾಗವನ್ನು ಆರಿಸಿಕೊಂಡು ಶಾಲೆಯನ್ನು ಪ್ರಾರಂಭಿಸಿದೆ. ನನ್ನ 18 ರಿಂದ 25ನೇ ವಯಸ್ಸಿನಲ್ಲಿ ಗ್ರಾಮದ ಜಾತ್ರೆ ಉತ್ಸವದಲ್ಲಿ ಆಸಕ್ತ ನಾಗರಿತಿದ್ದೆ, ವಿಧವೆ ವೇತನ ಹಾಗೂ ಇತರೆ ಸರ್ಕಾರಿ ಯೋಜನೆ ಕೊಡಿಸುವುದರಲ್ಲಿ ನಾಯಕತ್ವ ಹೊಂದಿರುತ್ತಿದ್ದೆ ಎಂದರು.

ನಮ್ಮ ಶಾಲಾ ಮಕ್ಕಳ ಪೋಷಕರಲ್ಲಿ ಶ್ರೀರಾಮ ಶಾಲೆ ಬಗ್ಗೆ ಒಳ್ಳೆ ಅಭಿಪ್ರಾಯ ಇದೆ. ಎಷ್ಟೇ ಹಣ, ಅಧಿಕಾರ, ರೂಪ ಇದ್ದರೂ ಮನುಷ್ಯನಿಗೆ ಮಾನವೀಯ ಮೌಲ್ಯ ಮುಖ್ಯ. ಹತ್ತು ದೇವಾಲಯಕ್ಕಿಂತ ಗ್ರಾಮಾಂತರದಲ್ಲಿ ಒಂದು ಉತ್ತಮ ಶಾಲೆ ಇರಬೇಕು ಎಂದು ತಮ್ಮ ಭಾವನಾತ್ಮಕ ನುಡಿಯನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಖ್ಯಾತ ವೈದ್ಯರು , ಅಧ್ಯಕ್ಷರು ವಿನಯಶ್ರೀ ವಿದ್ಯಾ ಸಂಸ್ಥೆ ಡಾ. ಆಂಜನಪ್ಪ, ಖ್ಯಾತ ವಕೀಲರು ಸಿ.ಹೆಚ್.ಹನುಮಂತರಾಯ, ಡಾ. ಗಿರೀಶ , ನಿವೃತ್ತ ಡಿ ಡಿ ಪಿ ಐ ಗಂಗಮರೇಗೌಡ, ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ರವಿಕುಮಾರ್. ಟಿ.ಕೆ, ವಿನಯಶ್ರೀ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮೀದೇವಿ ಜಿ. ಎಸ್, ಶಿಕ್ಷಕರ ವೃಂದ, ಸಿಬ್ಬಂದಿ ವರ್ಗ ಸೇರಿ ಹಲವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

3 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

5 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

7 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

10 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

21 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

22 hours ago