ಶ್ರೀಲಂಕಾ ವಿರುದ್ಧ ಭಾರತ ತಂಡ ಪ್ರಕಟ : ಕನ್ನಡಿಗ ಕೆ. ಎಲ್. ರಾಹುಲ್ ಗೆ ಶಾಕ್!

ಶ್ರೀಲಂಕಾ ವಿರುದ್ಧ ಜನವರಿ 3 ರಿಂದ ನಡೆಯಲಿರುವ ಮೂರು ಟಿ-ಟ್ವೆಂಟಿ ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಕನ್ನಡಿಗ ಕೆ. ಎಲ್. ರಾಹುಲ್ ಗೆ ಬಿಸಿಸಿಐ ಆಯ್ಕೆ ಸಮಿತಿ ಬಿಗ್ ಶಾಕ್ ನೀಡಿದೆ.

ಇತ್ತೀಚೆಗಿನ ಸರಣಿಗಳಲ್ಲಿ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲವಾಗಿರುವ ರಾಹುಲ್ ಅವರನ್ನು ಏಕದಿನ ತಂಡದ ಉಪನಾಯಕ ಸ್ಥಾನದಿಂದ ವಜಾಗೊಳಿಸಲಾಗಿದ್ದು ಇದೀಗ ಕೇವಲ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಆಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಮದುವೆಯ ಕಾರಣ ನೀಡಿ ರಜೆ ನೀಡುವಂತೆ ಬಿಸಿಸಿಐನ್ನು ಕೋರಿದ್ದ ಕೆ. ಎಲ್. ರಾಹುಲ್ ಅವರಿಗೆ ಜನವರಿ 3- 7 ರವರೆಗೆ ನಡೆಯಲಿರುವ ಟಿ-ಟ್ವೆಂಟಿ ಸರಣಿಯಿಂದ ಕೈಬಿಡಲಾಗಿದ್ದು, ಜನವರಿ 10 – 15 ರವರೆಗೆ ನಡೆಯಲಿರುವ ಏಕದಿನ ಸರಣಿಗೆ ಲಭ್ಯರಾಗಲಿದ್ದಾರೆ.

ಏಕದಿನ ಸರಣಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ತಂಡ ಪ್ರಕಟಿಸಲಾಗಿದ್ದು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಉಪನಾಯಕರಾಗಿದ್ದಾರೆ, ಟಿ-ಟ್ವೆಂಟಿ ತಂಡಕ್ಕೆ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ತಂಡ ಪ್ರಕಟಿಸಲಾಗಿದ್ದು ಉಪನಾಯಕರಾಗಿ ಬ್ಯಾಟ್ಸ್‌ಮನ್ ಸೂರ್ಯ ಕುಮಾರ್ ಯಾದವ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಭ್ ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆ. ಎಲ್. ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಸಿರಾಜ್, ಉಮ್ರಾನ್ ಮಲ್ಲಿಕ್, ಅಶ೯ದೀಪ್ ಸಿಂಗ್.

ಟಿ-ಟ್ವೆಂಟಿ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯ ಕುಮಾರ್ ಯಾದವ್ (ಉಪ ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್ ಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಸಂಜು ಸಾಮ್ಯಸನ್, ವಾಶಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಅಶ೯ದೀಪ್ ಸಿಂಗ್, ಹರ್ಷೆಲ್ ಪಟೇಲ್, ಉಮ್ರಾನ್ ಮಲ್ಲಿಕ್, ಶಿವಾಮ್ ಮಾವಿ, ಮುಕೇಶ್ ಕುಮಾರ್.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

32 minutes ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

3 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

6 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

21 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago