ಶ್ರೀಲಂಕಾ ವಿರುದ್ಧ ಭಾರತ ತಂಡ ಪ್ರಕಟ : ಕನ್ನಡಿಗ ಕೆ. ಎಲ್. ರಾಹುಲ್ ಗೆ ಶಾಕ್!

ಶ್ರೀಲಂಕಾ ವಿರುದ್ಧ ಜನವರಿ 3 ರಿಂದ ನಡೆಯಲಿರುವ ಮೂರು ಟಿ-ಟ್ವೆಂಟಿ ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಕನ್ನಡಿಗ ಕೆ. ಎಲ್. ರಾಹುಲ್ ಗೆ ಬಿಸಿಸಿಐ ಆಯ್ಕೆ ಸಮಿತಿ ಬಿಗ್ ಶಾಕ್ ನೀಡಿದೆ.

ಇತ್ತೀಚೆಗಿನ ಸರಣಿಗಳಲ್ಲಿ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲವಾಗಿರುವ ರಾಹುಲ್ ಅವರನ್ನು ಏಕದಿನ ತಂಡದ ಉಪನಾಯಕ ಸ್ಥಾನದಿಂದ ವಜಾಗೊಳಿಸಲಾಗಿದ್ದು ಇದೀಗ ಕೇವಲ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಆಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಮದುವೆಯ ಕಾರಣ ನೀಡಿ ರಜೆ ನೀಡುವಂತೆ ಬಿಸಿಸಿಐನ್ನು ಕೋರಿದ್ದ ಕೆ. ಎಲ್. ರಾಹುಲ್ ಅವರಿಗೆ ಜನವರಿ 3- 7 ರವರೆಗೆ ನಡೆಯಲಿರುವ ಟಿ-ಟ್ವೆಂಟಿ ಸರಣಿಯಿಂದ ಕೈಬಿಡಲಾಗಿದ್ದು, ಜನವರಿ 10 – 15 ರವರೆಗೆ ನಡೆಯಲಿರುವ ಏಕದಿನ ಸರಣಿಗೆ ಲಭ್ಯರಾಗಲಿದ್ದಾರೆ.

ಏಕದಿನ ಸರಣಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ತಂಡ ಪ್ರಕಟಿಸಲಾಗಿದ್ದು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಉಪನಾಯಕರಾಗಿದ್ದಾರೆ, ಟಿ-ಟ್ವೆಂಟಿ ತಂಡಕ್ಕೆ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ತಂಡ ಪ್ರಕಟಿಸಲಾಗಿದ್ದು ಉಪನಾಯಕರಾಗಿ ಬ್ಯಾಟ್ಸ್‌ಮನ್ ಸೂರ್ಯ ಕುಮಾರ್ ಯಾದವ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಭ್ ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆ. ಎಲ್. ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಸಿರಾಜ್, ಉಮ್ರಾನ್ ಮಲ್ಲಿಕ್, ಅಶ೯ದೀಪ್ ಸಿಂಗ್.

ಟಿ-ಟ್ವೆಂಟಿ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯ ಕುಮಾರ್ ಯಾದವ್ (ಉಪ ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್ ಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಸಂಜು ಸಾಮ್ಯಸನ್, ವಾಶಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಅಶ೯ದೀಪ್ ಸಿಂಗ್, ಹರ್ಷೆಲ್ ಪಟೇಲ್, ಉಮ್ರಾನ್ ಮಲ್ಲಿಕ್, ಶಿವಾಮ್ ಮಾವಿ, ಮುಕೇಶ್ ಕುಮಾರ್.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

5 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

14 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

18 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago