ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ ಚೌಡೇಶ್ವರಿ ದೇವಾಲಯದಲ್ಲಿ ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀ ತೊಗಟವೀರ ಕ್ಷತ್ರಿಯ ಸಮಾಜದ ಪೀಠಾಧಿಪತಿ, ಕುಲ ಗುರು ಶ್ರೀ ಶ್ರೀ ಶ್ರೀ ದಿವ್ಯಜ್ಞಾನಾನಂದಗಿರಿ ಸ್ವಾಮಿಯ ದಿವ್ಯ ಸಾನಿಧ್ಯದಲ್ಲಿ ಮೇ.1ರ ಶುಕ್ರವಾರ ರಾತ್ರಿ 9 ಗಂಟೆಯಿಂದ ಮೇ.2ರ ಶನಿವಾರ ಬೆಳಗ್ಗೆ 9ರವರೆಗೆ ಜ್ಯೋತಿ ಮಹೋತ್ಸವ, ಬೆಳ್ಳಿ ಪಲ್ಲಕ್ಕಿಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.
ಜ್ಯೋತಿ, ಪಲ್ಲಕ್ಕಿ ಉತ್ಸವ ಪ್ರಯುಕ್ತ ಶ್ರೀ ಅಭಯ ಚೌಡೇಶ್ವರಿ ದೇವಿಗೆ ವಿಶೇಷ ಬೆಳ್ಳಿ ವಜ್ರಾಂಗಿ ಅಲಂಕಾರ, ಅಭಿಷೇಕ, ಗಂಗೆ ಪೂಜೆ, ಕಳಸಾ ಪೂಜೆ ಸೇರಿದಂತೆ ಇತರೆ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಗಿತ್ತು. ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…