ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ ಚೌಡೇಶ್ವರಿ ದೇವಾಲಯದಲ್ಲಿ ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀ ತೊಗಟವೀರ ಕ್ಷತ್ರಿಯ ಸಮಾಜದ ಪೀಠಾಧಿಪತಿ, ಕುಲ ಗುರು ಶ್ರೀ ಶ್ರೀ ಶ್ರೀ ದಿವ್ಯಜ್ಞಾನಾನಂದಗಿರಿ ಸ್ವಾಮಿಯ ದಿವ್ಯ ಸಾನಿಧ್ಯದಲ್ಲಿ ಮೇ.1ರ ಶುಕ್ರವಾರ ರಾತ್ರಿ 9 ಗಂಟೆಯಿಂದ ಮೇ.2ರ ಶನಿವಾರ ಬೆಳಗ್ಗೆ 9ರವರೆಗೆ ಜ್ಯೋತಿ ಮಹೋತ್ಸವ, ಬೆಳ್ಳಿ ಪಲ್ಲಕ್ಕಿಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.
ಜ್ಯೋತಿ, ಪಲ್ಲಕ್ಕಿ ಉತ್ಸವ ಪ್ರಯುಕ್ತ ಶ್ರೀ ಅಭಯ ಚೌಡೇಶ್ವರಿ ದೇವಿಗೆ ವಿಶೇಷ ಬೆಳ್ಳಿ ವಜ್ರಾಂಗಿ ಅಲಂಕಾರ, ಅಭಿಷೇಕ, ಗಂಗೆ ಪೂಜೆ, ಕಳಸಾ ಪೂಜೆ ಸೇರಿದಂತೆ ಇತರೆ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಗಿತ್ತು. ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…