ಜಗದೋದ್ಧಾರಕ ಶ್ರೀಕೃಷ್ಣನ ಜನ್ಮಾಷ್ಟಮಿಯನ್ನು ತೂಬಗೆರೆ ಹೋಬಳಿಯ ಯದ್ದಲಹಳ್ಳಿ ಸಮೀಪವಿರುವ ಶ್ರೀರಂಗವನದ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರದ್ಧೆ-ಭಕ್ತಿಯಿಂದ ಆಚರಿಸಲಾಯಿತು.
ದೊಡ್ಡಬಳ್ಳಾಪುರ ತಾಲೂಕು ಅರ್ಚಕ ಸಂಘದ ಅಧ್ಯಕ್ಷರಾದ ವಿದ್ವಾನ್ ಎಸ್ ನವೀನ್ ಮಾತನಾಡಿ, ಈ ದಿನ ಜನ್ಮಾಷ್ಟಮಿ ಪ್ರಯುಕ್ತ ರುಕ್ಮಿಣಿ ಸತ್ಯಭಾಮ ಸಮೇತ ವೇಣುಗೋಪಾಲ ಸ್ವಾಮಿಗೆ ಪ್ರಾತಃಕಾಲ ಕ್ಷೀರಾಭಿಷೇಕ, ಮಹಾಭಿಷೇಕ, ಮೊದಲಾದಿಯಾಗಿ ಅಷ್ಟಗಂಧ ಅರ್ಚನೆ, ವಿಷ್ಣು ಸಹಸ್ರನಾಮ ಪೂರ್ವಕ ತುಳಸಿ ಅರ್ಚನೆ, ಮಹಾನೈವೇದ್ಯ ಸಮರ್ಪಣೆ ನಡೆಸಲಾಯಿತು ಎಂದರು.
ದೇವಸ್ಥಾನ ಜೀರ್ಣೋದ್ಧಾರ ಮಂಡಳಿಯ ಸತ್ಯನಾರಾಯಣಪ್ಪ ಮಾತನಾಡಿ, 20 ವರ್ಷಗಳ ಹಿಂದೆ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ರುಕ್ಮಿಣಿ ಸತ್ಯಭಾಮ ಸಮೇತ ಶ್ರೀ ಕೃಷ್ಣ ವಿಗ್ರಹ ಬಹಳ ವಿರಳವಾಗಿದ್ದು ಅದನ್ನು ನಾವು ಇಲ್ಲಿ ಕಾಣಬಹುದು ಎಂದು ತಿಳಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಹಣ್ಣು-ಕಾಯಿ ಸೇವೆ, ಬೆಣ್ಣೆ ಸೇವೆ ಮುಂತಾದವುಗಳನ್ನು ಸಮರ್ಪಿಸಿದರು. ವಿಶೇಷ ಅಲಂಕಾರದೊಂದಿಗೆ ಶ್ರೀ ವೇಣುಗೋಪಾಲ ಸ್ವಾಮಿಯ ಮೂರ್ತಿ ಕಂಗೊಳಿಸುತ್ತಿತ್ತು. ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಶ್ರೀರಂಗವನ ಮಾಲೀಕರಾದ ಶಶಿಧರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಲಘುಮಯ್ಯ, ಯುವ ಮುಖಂಡರಾದ ಉದಯ ಆರಾಧ್ಯ, ಸ್ಥಳೀಯರಾದ ಮೂರ್ತಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…