ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವೇಣುಗೋಪಾಲಕೃಷ್ಣ ದೇವರಿಗೆ ವಿಶೇಷ ಅಲಂಕಾರ

ಜಗದೋದ್ಧಾರಕ ಶ್ರೀಕೃಷ್ಣನ ಜನ್ಮಾಷ್ಟಮಿಯನ್ನು ತೂಬಗೆರೆ ಹೋಬಳಿಯ ಯದ್ದಲಹಳ್ಳಿ ಸಮೀಪವಿರುವ ಶ್ರೀರಂಗವನದ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರದ್ಧೆ-ಭಕ್ತಿಯಿಂದ ಆಚರಿಸಲಾಯಿತು.

ದೊಡ್ಡಬಳ್ಳಾಪುರ ತಾಲೂಕು ಅರ್ಚಕ ಸಂಘದ ಅಧ್ಯಕ್ಷರಾದ ವಿದ್ವಾನ್ ಎಸ್ ನವೀನ್ ಮಾತನಾಡಿ, ಈ ದಿನ ಜನ್ಮಾಷ್ಟಮಿ ಪ್ರಯುಕ್ತ ರುಕ್ಮಿಣಿ ಸತ್ಯಭಾಮ ಸಮೇತ ವೇಣುಗೋಪಾಲ ಸ್ವಾಮಿಗೆ ಪ್ರಾತಃಕಾಲ ಕ್ಷೀರಾಭಿಷೇಕ, ಮಹಾಭಿಷೇಕ, ಮೊದಲಾದಿಯಾಗಿ ಅಷ್ಟಗಂಧ ಅರ್ಚನೆ, ವಿಷ್ಣು ಸಹಸ್ರನಾಮ ಪೂರ್ವಕ ತುಳಸಿ ಅರ್ಚನೆ, ಮಹಾನೈವೇದ್ಯ ಸಮರ್ಪಣೆ ನಡೆಸಲಾಯಿತು ಎಂದರು.

ದೇವಸ್ಥಾನ ಜೀರ್ಣೋದ್ಧಾರ ಮಂಡಳಿಯ ಸತ್ಯನಾರಾಯಣಪ್ಪ ಮಾತನಾಡಿ, 20 ವರ್ಷಗಳ ಹಿಂದೆ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ರುಕ್ಮಿಣಿ ಸತ್ಯಭಾಮ ಸಮೇತ ಶ್ರೀ ಕೃಷ್ಣ ವಿಗ್ರಹ ಬಹಳ ವಿರಳವಾಗಿದ್ದು ಅದನ್ನು ನಾವು ಇಲ್ಲಿ ಕಾಣಬಹುದು ಎಂದು ತಿಳಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಹಣ್ಣು-ಕಾಯಿ ಸೇವೆ, ಬೆಣ್ಣೆ ಸೇವೆ ಮುಂತಾದವುಗಳನ್ನು ಸಮರ್ಪಿಸಿದರು. ವಿಶೇಷ ಅಲಂಕಾರದೊಂದಿಗೆ ಶ್ರೀ ವೇಣುಗೋಪಾಲ ಸ್ವಾಮಿಯ ಮೂರ್ತಿ ಕಂಗೊಳಿಸುತ್ತಿತ್ತು. ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.

ಶ್ರೀರಂಗವನ ಮಾಲೀಕರಾದ ಶಶಿಧರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಲಘುಮಯ್ಯ, ಯುವ ಮುಖಂಡರಾದ ಉದಯ ಆರಾಧ್ಯ, ಸ್ಥಳೀಯರಾದ ಮೂರ್ತಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

5 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

7 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

10 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

24 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

2 days ago