ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವೇಣುಗೋಪಾಲಕೃಷ್ಣ ದೇವರಿಗೆ ವಿಶೇಷ ಅಲಂಕಾರ

ಜಗದೋದ್ಧಾರಕ ಶ್ರೀಕೃಷ್ಣನ ಜನ್ಮಾಷ್ಟಮಿಯನ್ನು ತೂಬಗೆರೆ ಹೋಬಳಿಯ ಯದ್ದಲಹಳ್ಳಿ ಸಮೀಪವಿರುವ ಶ್ರೀರಂಗವನದ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರದ್ಧೆ-ಭಕ್ತಿಯಿಂದ ಆಚರಿಸಲಾಯಿತು.

ದೊಡ್ಡಬಳ್ಳಾಪುರ ತಾಲೂಕು ಅರ್ಚಕ ಸಂಘದ ಅಧ್ಯಕ್ಷರಾದ ವಿದ್ವಾನ್ ಎಸ್ ನವೀನ್ ಮಾತನಾಡಿ, ಈ ದಿನ ಜನ್ಮಾಷ್ಟಮಿ ಪ್ರಯುಕ್ತ ರುಕ್ಮಿಣಿ ಸತ್ಯಭಾಮ ಸಮೇತ ವೇಣುಗೋಪಾಲ ಸ್ವಾಮಿಗೆ ಪ್ರಾತಃಕಾಲ ಕ್ಷೀರಾಭಿಷೇಕ, ಮಹಾಭಿಷೇಕ, ಮೊದಲಾದಿಯಾಗಿ ಅಷ್ಟಗಂಧ ಅರ್ಚನೆ, ವಿಷ್ಣು ಸಹಸ್ರನಾಮ ಪೂರ್ವಕ ತುಳಸಿ ಅರ್ಚನೆ, ಮಹಾನೈವೇದ್ಯ ಸಮರ್ಪಣೆ ನಡೆಸಲಾಯಿತು ಎಂದರು.

ದೇವಸ್ಥಾನ ಜೀರ್ಣೋದ್ಧಾರ ಮಂಡಳಿಯ ಸತ್ಯನಾರಾಯಣಪ್ಪ ಮಾತನಾಡಿ, 20 ವರ್ಷಗಳ ಹಿಂದೆ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ರುಕ್ಮಿಣಿ ಸತ್ಯಭಾಮ ಸಮೇತ ಶ್ರೀ ಕೃಷ್ಣ ವಿಗ್ರಹ ಬಹಳ ವಿರಳವಾಗಿದ್ದು ಅದನ್ನು ನಾವು ಇಲ್ಲಿ ಕಾಣಬಹುದು ಎಂದು ತಿಳಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಹಣ್ಣು-ಕಾಯಿ ಸೇವೆ, ಬೆಣ್ಣೆ ಸೇವೆ ಮುಂತಾದವುಗಳನ್ನು ಸಮರ್ಪಿಸಿದರು. ವಿಶೇಷ ಅಲಂಕಾರದೊಂದಿಗೆ ಶ್ರೀ ವೇಣುಗೋಪಾಲ ಸ್ವಾಮಿಯ ಮೂರ್ತಿ ಕಂಗೊಳಿಸುತ್ತಿತ್ತು. ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.

ಶ್ರೀರಂಗವನ ಮಾಲೀಕರಾದ ಶಶಿಧರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಲಘುಮಯ್ಯ, ಯುವ ಮುಖಂಡರಾದ ಉದಯ ಆರಾಧ್ಯ, ಸ್ಥಳೀಯರಾದ ಮೂರ್ತಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

3 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

10 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

11 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

24 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

24 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

24 hours ago