ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಸಂವಿಧಾನ ಪೀಠಿಕೆಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಸಂವಿಧಾನದ ಪ್ರಸ್ತಾವನೆಯನ್ನು ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ವೆಂಕಟೇಶ್ ರೆಡ್ಡಿ ಬೋಧಿಸಿದರು.

ಈ ವೇಳೆ ಡಿಎಲ್ ಎಸ್ ಎ ಮತ್ತು ಬಿಆರ್ ಡಿ ಸದಸ್ಯ ಕಾರ್ಯದರ್ಶಿ ಶ್ರೀಶೈಲ್ ಭೀಮಸೇನ್ ಬಾಗಾಡಿ ಮಾತನಾಡಿ, ಪ್ರತಿ ವರ್ಷ ನವೆಂಬರ್ 26 ರಂದು ಆಚರಿಸಲಾಗುವ ಸಂವಿಧಾನ ದಿನವು ಭಾರತದ ಇತಿಹಾಸದಲ್ಲಿ ಒಂದು ಮಹತ್ವದ ದಿನವಾಗಿದೆ. ಈ ದಿನಾಂಕವು 1949 ರಲ್ಲಿ ಭಾರತದ ಸಂವಿಧಾನವನ್ನು ಕಾನೂನಿನ ರೂಪದಲ್ಲಿ ಅಂಗೀಕರಿಸಿದ ಐತಿಹಾಸಿಕ ಕ್ಷಣವನ್ನು ನೆನಪಿಸುತ್ತದೆ ಎಂದರು.

ಸಂವಿಧಾನವು ಜನವರಿ 26, 1950 ರಂದು ಜಾರಿಗೆ ಬಂದು ಭಾರತವನ್ನು ಸಾರ್ವಭೌಮ ಗಣರಾಜ್ಯವೆಂದು ಘೋಷಿಸಿತು. ಈ ದಿನವನ್ನು ನಾವು ಗಣರಾಜ್ಯೋತ್ಸವ ಎಂದು ಆಚರಿಸುತ್ತೇವೆ. ಸಂವಿಧಾನದ ಮಹತ್ವ, ಅದರ ರಚನಾಕಾರರು ಮತ್ತು ಆಧುನಿಕ ಭಾರತಕ್ಕೆ ಅದರ ಪ್ರಸ್ತುತತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಭಾರತ ಸರ್ಕಾರವು 2015 ರಲ್ಲಿ ನವೆಂಬರ್ 26 ಅನ್ನು ಅಧಿಕೃತವಾಗಿ ಸಂವಿಧಾನ ದಿನ ಎಂದು ಘೋಷಿಸಿತು ಎಂದು ಹೇಳಿದರು..

ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಂತಹ ಈ ದಿನವನ್ನು ಸಂವಿಧಾನ ದಿನವಾಗಿ ಆಚರಣೆ ಮಾಡುತ್ತಿರುವುದು ನಮಗೆಲ್ಲರಿಗೂ ಸಂತಸದ ವಿಷಯ, ಸಂವಿಧಾನದ ಆಶಯದಂತೆ ನಾವೆಲ್ಲರೂ ಸಮಾಜದಲ್ಲಿ ಸಮಾನತೆಯಿಂದ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಹೇಳಿದರು.

ನಮ್ಮದು ಲಿಖಿತ ಸಂವಿಧಾನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಾಗೂ ಇತರೆ ಮಹಾನ್ ಚೇತನರ ನೆರವಿನಿಂದ ಸುಧೀರ್ಘವಾಗಿ ಎರಡು ವರ್ಷ 11 ತಿಂಗಳು 18 ದಿನಗಳ ಕಾಲ ಸತತ ಪ್ರಯತ್ನದಿಂದ 395 ವಿಧಿಗಳು, 8 ಅನುಸೂಚಿಗಳು, 22 ಭಾಗಗಳನ್ನು ಹೊಂದಿರುವ ಪ್ರಪಂಚದ ಅತೀ ದೊಡ್ಡ ಸಂವಿಧಾನವನ್ನು 1950 ನವೆಂಬರ್ 26 ರಂದು ಸಮರ್ಥಿಸಿಕೊಳ್ಳಲಾಯಿತು. ಪ್ರಸ್ತುತ 467 ವಿಧಿಗಳು, 25 ಭಾಗಗಳು, 12 ಅನುಸೂಚಿಗಳಿವೆ. ಇದರಿಂದ ನಾವೆಲ್ಲರೂ ನಮಗೆ ನೀಡಿರುವ ಹಕ್ಕುಗಳನ್ನು ಬಳಸಿಕೊಂಡು ಸ್ವತಂತ್ರವಾಗಿ ಮಾತನಾಡುತ್ತಿದ್ದೇವೆ ಎಂದರು.

ಕಾನೂನು ವಿದ್ಯಾರ್ಥಿಗಳು ಸಂವಿಧಾನವನ್ನು ಚೆನ್ನಾಗಿ ಓದಿ ಕರಗತ ಮಾಡಿಕೊಳ್ಳಬೇಕು. ಕಾನೂನಿನ ಮುಂದೆ ಎಲ್ಲಾರೂ ಸಮಾನರು. ವಕೀಲ ವೃತ್ತಿ ಪ್ರಾರಂಭಿಸುವವರು ಶಿಸ್ತು ಬದ್ಧವಾಗಿ ಕಾನೂನನ್ನು ಎತ್ತಿಹಿಡಿಯಬೇಕು ಎಂದರು.

ಈ ವೇಳೆ ಕಾಲೇಜಿನ ಆಡಳಿತ ಮಂಡಳಿ, ಕಾನೂನು ಕಾಲೇಜಿನ ಉಪನ್ಯಾಸಕರು, ಪದವಿ, ಪಿಯು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು….

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

5 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago