ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಸಂವಿಧಾನ ಪೀಠಿಕೆಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಸಂವಿಧಾನದ ಪ್ರಸ್ತಾವನೆಯನ್ನು ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ವೆಂಕಟೇಶ್ ರೆಡ್ಡಿ ಬೋಧಿಸಿದರು.

ಈ ವೇಳೆ ಡಿಎಲ್ ಎಸ್ ಎ ಮತ್ತು ಬಿಆರ್ ಡಿ ಸದಸ್ಯ ಕಾರ್ಯದರ್ಶಿ ಶ್ರೀಶೈಲ್ ಭೀಮಸೇನ್ ಬಾಗಾಡಿ ಮಾತನಾಡಿ, ಪ್ರತಿ ವರ್ಷ ನವೆಂಬರ್ 26 ರಂದು ಆಚರಿಸಲಾಗುವ ಸಂವಿಧಾನ ದಿನವು ಭಾರತದ ಇತಿಹಾಸದಲ್ಲಿ ಒಂದು ಮಹತ್ವದ ದಿನವಾಗಿದೆ. ಈ ದಿನಾಂಕವು 1949 ರಲ್ಲಿ ಭಾರತದ ಸಂವಿಧಾನವನ್ನು ಕಾನೂನಿನ ರೂಪದಲ್ಲಿ ಅಂಗೀಕರಿಸಿದ ಐತಿಹಾಸಿಕ ಕ್ಷಣವನ್ನು ನೆನಪಿಸುತ್ತದೆ ಎಂದರು.

ಸಂವಿಧಾನವು ಜನವರಿ 26, 1950 ರಂದು ಜಾರಿಗೆ ಬಂದು ಭಾರತವನ್ನು ಸಾರ್ವಭೌಮ ಗಣರಾಜ್ಯವೆಂದು ಘೋಷಿಸಿತು. ಈ ದಿನವನ್ನು ನಾವು ಗಣರಾಜ್ಯೋತ್ಸವ ಎಂದು ಆಚರಿಸುತ್ತೇವೆ. ಸಂವಿಧಾನದ ಮಹತ್ವ, ಅದರ ರಚನಾಕಾರರು ಮತ್ತು ಆಧುನಿಕ ಭಾರತಕ್ಕೆ ಅದರ ಪ್ರಸ್ತುತತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಭಾರತ ಸರ್ಕಾರವು 2015 ರಲ್ಲಿ ನವೆಂಬರ್ 26 ಅನ್ನು ಅಧಿಕೃತವಾಗಿ ಸಂವಿಧಾನ ದಿನ ಎಂದು ಘೋಷಿಸಿತು ಎಂದು ಹೇಳಿದರು..

ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಂತಹ ಈ ದಿನವನ್ನು ಸಂವಿಧಾನ ದಿನವಾಗಿ ಆಚರಣೆ ಮಾಡುತ್ತಿರುವುದು ನಮಗೆಲ್ಲರಿಗೂ ಸಂತಸದ ವಿಷಯ, ಸಂವಿಧಾನದ ಆಶಯದಂತೆ ನಾವೆಲ್ಲರೂ ಸಮಾಜದಲ್ಲಿ ಸಮಾನತೆಯಿಂದ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಹೇಳಿದರು.

ನಮ್ಮದು ಲಿಖಿತ ಸಂವಿಧಾನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಾಗೂ ಇತರೆ ಮಹಾನ್ ಚೇತನರ ನೆರವಿನಿಂದ ಸುಧೀರ್ಘವಾಗಿ ಎರಡು ವರ್ಷ 11 ತಿಂಗಳು 18 ದಿನಗಳ ಕಾಲ ಸತತ ಪ್ರಯತ್ನದಿಂದ 395 ವಿಧಿಗಳು, 8 ಅನುಸೂಚಿಗಳು, 22 ಭಾಗಗಳನ್ನು ಹೊಂದಿರುವ ಪ್ರಪಂಚದ ಅತೀ ದೊಡ್ಡ ಸಂವಿಧಾನವನ್ನು 1950 ನವೆಂಬರ್ 26 ರಂದು ಸಮರ್ಥಿಸಿಕೊಳ್ಳಲಾಯಿತು. ಪ್ರಸ್ತುತ 467 ವಿಧಿಗಳು, 25 ಭಾಗಗಳು, 12 ಅನುಸೂಚಿಗಳಿವೆ. ಇದರಿಂದ ನಾವೆಲ್ಲರೂ ನಮಗೆ ನೀಡಿರುವ ಹಕ್ಕುಗಳನ್ನು ಬಳಸಿಕೊಂಡು ಸ್ವತಂತ್ರವಾಗಿ ಮಾತನಾಡುತ್ತಿದ್ದೇವೆ ಎಂದರು.

ಕಾನೂನು ವಿದ್ಯಾರ್ಥಿಗಳು ಸಂವಿಧಾನವನ್ನು ಚೆನ್ನಾಗಿ ಓದಿ ಕರಗತ ಮಾಡಿಕೊಳ್ಳಬೇಕು. ಕಾನೂನಿನ ಮುಂದೆ ಎಲ್ಲಾರೂ ಸಮಾನರು. ವಕೀಲ ವೃತ್ತಿ ಪ್ರಾರಂಭಿಸುವವರು ಶಿಸ್ತು ಬದ್ಧವಾಗಿ ಕಾನೂನನ್ನು ಎತ್ತಿಹಿಡಿಯಬೇಕು ಎಂದರು.

ಈ ವೇಳೆ ಕಾಲೇಜಿನ ಆಡಳಿತ ಮಂಡಳಿ, ಕಾನೂನು ಕಾಲೇಜಿನ ಉಪನ್ಯಾಸಕರು, ಪದವಿ, ಪಿಯು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು….

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

1 hour ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

18 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago