ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡವನ್ನು ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂದು ಶ್ರೀ ಕೊಂಗಾಡಿಯಪ್ಪ ಪದವಿ ಕಾಲೇಜಿನ ಪ್ರಾಂಶುಪಾಲ ಪಂಚಾಕ್ಷರಯ್ಯ ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಕರ್ನಾಟಕ ಏಕೀಕರಣದ ಕನಸು ನನಸಾಯಿತು. ಭವ್ಯ ಪರಂಪರೆಯನ್ನು ಹೊಂದಿರುವ ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬಗ್ಗೆ ಕನ್ನಡಿಗರ ಅಭಿಮಾನ ಹೊಂದಬೇಕಾಗಿದೆ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಕನ್ನಡಿಗರು ಧ್ವನಿ ಎತ್ತಬೇಕಾಗಿದೆ ಎಂದರು.
ನಂತರ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟೇಶ್ ರೆಡ್ಡಿ ಮಾತನಾಡಿ, ಕುವೆಂಪು ರಚಿಸಿರುವ ನಾಡಗೀತೆಗೆ ನೂರು ವರ್ಷ ತುಂಬಿದ ಸಂಭ್ರಮವನ್ನು ರಾಜ್ಯದ ಶಾಲಾ ಕಾಲೇಜು, ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಆಚರಿಸಬೇಕಾಗಿದೆ ಎಂದರು.
ಈ ವೇಳೆ ಕಾನೂನು ಪದವಿ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು..
ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…