ಶ್ರೀ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂವಾದ

ಆಧುನಿಕ ಮಾಧ್ಯಮಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಪುಸ್ತಕದ ಓದು ನೀಡುವ ಆತ್ಮೀಯ ಭಾವ ಅನನ್ಯವಾಗಿಯೇ ಉಳಿದಿದೆ ಎಂದು ಕವಯತ್ರಿ ಮಂಜುಳಾ ಹುಲಿಕುಂಟೆ ಹೇಳಿದರು.

ಇಲ್ಲಿನ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಅರಿವು ಸಾಹಿತ್ಯ ವೇದಿಕೆಯ ನೇತೃತ್ವದಲ್ಲಿ ನಡೆದ ಸಾಹಿತ್ಯ ಚರ್ಚೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿಯ ಆಯಾಮಗಳು ಭಿನ್ನವಾಗಿರುತ್ತವೆ. ಸಮಕಾಲೀನ ಬರೆಹಗಾರರ ಬರೆಹಗಳು ಅವರನ್ನು ತಲುಪಬೇಕು. ಕೃತಕ ಬುದ್ದಿಮತ್ತೆಯ ಯುಗದಲ್ಲಿ ಸೃಜನಶೀಲತೆಯೂ ಸರಕಾಗುತ್ತಿದೆ. ಆದರೆ ಮನುಷ್ಯ ಸಂವೇದನೆಯನ್ನು ಪ್ರಜ್ಞಾಪೂರ್ವಕವಾಗಿ ಬಳಸಿಕೊಳ್ಳುವ ಕೆಲಸ ಆಗಬೇಕು. ಬದಲಾಗುತ್ತಿರುವ ಸಾಮಾಜಿಕ ಸಂದರ್ಭಗಳಲ್ಲಿ ಸಾಹಿತ್ಯದ ಪ್ರಭಾವ ಹಾಗೂ ಔಚಿತ್ಯದ ಕುರಿತು ಅಕಾಡೆಮಿಕ್‌ ಆದ ಚರ್ಚೆಗಳು ಅಗತ್ಯ. ಎಲ್ಲ ಕಾಲಕ್ಕೂ ಸಲ್ಲುವ ಮತ್ತು ಎಲ್ಲರನ್ನೂ ಒಳಗೊಳ್ಳುವ ಚಿಂತನೆಗಳ ಬಗ್ಗೆ ಮರು ವಿಮರ್ಶೆ ಅಗತ್ಯವಿದೆ ಎಂದರು.

*ಸಾಹಿತ್ಯ ಸಂವೇದನಾಶೀಲ ವ್ಯಕ್ತಿತ್ವದ ಜತೆಗಾರ:*

ಸಾಹಿತ್ಯ ಸಂವೇದನೆಯ ಒಳನೋಟಗಳ ಕುರಿತು ಮಾತನಾಡಿದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ರವಿಕಿರಣ್ ಕೆ.ಆರ್, ಸಾಹಿತ್ಯದ ಓದು ವ್ಯಕ್ತಿಯನ್ನು ಎಂದಿಗೂ ಏಕಾಂಗಿಯಾಗಿರಲು ಬಿಡುವುದಿಲ್ಲ. ಸಾಹಿತ್ಯ ಸಂವೇದನಾಶೀಲ ವ್ಯಕ್ತಿತ್ವದ ನೈಜ ಜತೆಗಾರನಿದ್ದಂತೆ. ಭಾವನೆಗಳ ಅನನ್ಯತೆ ಅರಿತರೆ ಸಂಬಂಧಗಳ ಮಹತ್ವ ತಿಳಿಯುತ್ತದೆ. ಸಾಹಿತ್ಯ ಗತಕಾಲದ ಸರಕು ಮಾತ್ರವಾಗದೆ, ಸಮಾಜ ಹಾಗೂ ವರ್ತಮಾನದ ಕುರಿತ ಆಲೋಚನೆಗಳ ಜೊತೆಗೆ ಭವಿಷ್ಯದ ಬಗೆಗಿನ ಎಚ್ಚರಗಳನ್ನೂ ಒಳಗೊಂಡಿರುತ್ತದೆ ಎಂದರು.

ಯುವ ಮನಸ್ಸುಗಳಲ್ಲಿ ಮೂಡುವ ರಸಭಾವಗಳಿಗೆ ಅಕ್ಷರದ ರೂಪ ದೊರೆಯಬೇಕು. ಅನ್ನಿಸಿದ್ದನ್ನು ಹೇಳಿಬಿಡುವ ಮುಕ್ತತೆ ಸಾಹಿತಿಗೆ ಅಗತ್ಯ. ಕನ್ನಡದ ನಾಳೆಗಳ ಬಗ್ಗೆ ಚಿಂತಿಸುವ ಜತೆಗೆ ಸಶಕ್ತ ಚಿಂತನೆಗಳನ್ನು ಪ್ರಚೋದಿಸಿ, ಮಾನವೀಯ ಆಲೋಚನೆಗಳಿಗೆ ಮುಖಾಮುಖಿಯಾಗಿಸುವ ಪ್ರಕ್ರಿಯೆ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಕನ್ನಡ ವಿಭಾಗದ ಮುಖ್ಯಸ್ಥ ಪ್ರವೀಣ್‌ ತಳಗವಾರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಓದು ಮತ್ತು ಗ್ರಹಿಕೆಯ ಅರಿವು ಹೆಚ್ಚಿಸುವ ನಿಟ್ಟಿನಲ್ಲಿ ಇಂತಹ ಸಾಹಿತ್ಯಿಕ ಚರ್ಚೆಗಳು ಹೆಚ್ಚು ಮಹತ್ವ ಪಡೆದಿವೆ ಎಂದರು.

ಪ್ರಾಂಶುಪಾಲ ಪ್ರೊ.ಆರ್.ಎನ್.ಪಂಚಾಕ್ಷರಯ್ಯ ಅಧ್ಯಕ್ಷತೆ ವಹಿಸಿದ್ದರು. ಮಂಜುಳಾ ಹುಲಿಕುಂಟೆ ಹಾಗೂ ಪ್ರೊ.ಕೆ.ಆರ್.ರವಿಕಿರಣ್ ತಮ್ಮ ಸ್ವರಚಿತ ಕವನಗಳನ್ನು ವಾಚಿಸಿದರು. ವಿದ್ಯಾರ್ಥಿಗಳೊಂದಿಗೆ ಸಾಹತ್ಯ ಸಂವಾದ ನಡೆಯಿತು.

ಕನ್ನಡ ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

18 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

18 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

18 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

21 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

1 day ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

1 day ago