ಶ್ರೀ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂವಾದ

ಆಧುನಿಕ ಮಾಧ್ಯಮಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಪುಸ್ತಕದ ಓದು ನೀಡುವ ಆತ್ಮೀಯ ಭಾವ ಅನನ್ಯವಾಗಿಯೇ ಉಳಿದಿದೆ ಎಂದು ಕವಯತ್ರಿ ಮಂಜುಳಾ ಹುಲಿಕುಂಟೆ ಹೇಳಿದರು.

ಇಲ್ಲಿನ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಅರಿವು ಸಾಹಿತ್ಯ ವೇದಿಕೆಯ ನೇತೃತ್ವದಲ್ಲಿ ನಡೆದ ಸಾಹಿತ್ಯ ಚರ್ಚೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿಯ ಆಯಾಮಗಳು ಭಿನ್ನವಾಗಿರುತ್ತವೆ. ಸಮಕಾಲೀನ ಬರೆಹಗಾರರ ಬರೆಹಗಳು ಅವರನ್ನು ತಲುಪಬೇಕು. ಕೃತಕ ಬುದ್ದಿಮತ್ತೆಯ ಯುಗದಲ್ಲಿ ಸೃಜನಶೀಲತೆಯೂ ಸರಕಾಗುತ್ತಿದೆ. ಆದರೆ ಮನುಷ್ಯ ಸಂವೇದನೆಯನ್ನು ಪ್ರಜ್ಞಾಪೂರ್ವಕವಾಗಿ ಬಳಸಿಕೊಳ್ಳುವ ಕೆಲಸ ಆಗಬೇಕು. ಬದಲಾಗುತ್ತಿರುವ ಸಾಮಾಜಿಕ ಸಂದರ್ಭಗಳಲ್ಲಿ ಸಾಹಿತ್ಯದ ಪ್ರಭಾವ ಹಾಗೂ ಔಚಿತ್ಯದ ಕುರಿತು ಅಕಾಡೆಮಿಕ್‌ ಆದ ಚರ್ಚೆಗಳು ಅಗತ್ಯ. ಎಲ್ಲ ಕಾಲಕ್ಕೂ ಸಲ್ಲುವ ಮತ್ತು ಎಲ್ಲರನ್ನೂ ಒಳಗೊಳ್ಳುವ ಚಿಂತನೆಗಳ ಬಗ್ಗೆ ಮರು ವಿಮರ್ಶೆ ಅಗತ್ಯವಿದೆ ಎಂದರು.

*ಸಾಹಿತ್ಯ ಸಂವೇದನಾಶೀಲ ವ್ಯಕ್ತಿತ್ವದ ಜತೆಗಾರ:*

ಸಾಹಿತ್ಯ ಸಂವೇದನೆಯ ಒಳನೋಟಗಳ ಕುರಿತು ಮಾತನಾಡಿದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ರವಿಕಿರಣ್ ಕೆ.ಆರ್, ಸಾಹಿತ್ಯದ ಓದು ವ್ಯಕ್ತಿಯನ್ನು ಎಂದಿಗೂ ಏಕಾಂಗಿಯಾಗಿರಲು ಬಿಡುವುದಿಲ್ಲ. ಸಾಹಿತ್ಯ ಸಂವೇದನಾಶೀಲ ವ್ಯಕ್ತಿತ್ವದ ನೈಜ ಜತೆಗಾರನಿದ್ದಂತೆ. ಭಾವನೆಗಳ ಅನನ್ಯತೆ ಅರಿತರೆ ಸಂಬಂಧಗಳ ಮಹತ್ವ ತಿಳಿಯುತ್ತದೆ. ಸಾಹಿತ್ಯ ಗತಕಾಲದ ಸರಕು ಮಾತ್ರವಾಗದೆ, ಸಮಾಜ ಹಾಗೂ ವರ್ತಮಾನದ ಕುರಿತ ಆಲೋಚನೆಗಳ ಜೊತೆಗೆ ಭವಿಷ್ಯದ ಬಗೆಗಿನ ಎಚ್ಚರಗಳನ್ನೂ ಒಳಗೊಂಡಿರುತ್ತದೆ ಎಂದರು.

ಯುವ ಮನಸ್ಸುಗಳಲ್ಲಿ ಮೂಡುವ ರಸಭಾವಗಳಿಗೆ ಅಕ್ಷರದ ರೂಪ ದೊರೆಯಬೇಕು. ಅನ್ನಿಸಿದ್ದನ್ನು ಹೇಳಿಬಿಡುವ ಮುಕ್ತತೆ ಸಾಹಿತಿಗೆ ಅಗತ್ಯ. ಕನ್ನಡದ ನಾಳೆಗಳ ಬಗ್ಗೆ ಚಿಂತಿಸುವ ಜತೆಗೆ ಸಶಕ್ತ ಚಿಂತನೆಗಳನ್ನು ಪ್ರಚೋದಿಸಿ, ಮಾನವೀಯ ಆಲೋಚನೆಗಳಿಗೆ ಮುಖಾಮುಖಿಯಾಗಿಸುವ ಪ್ರಕ್ರಿಯೆ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಕನ್ನಡ ವಿಭಾಗದ ಮುಖ್ಯಸ್ಥ ಪ್ರವೀಣ್‌ ತಳಗವಾರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಓದು ಮತ್ತು ಗ್ರಹಿಕೆಯ ಅರಿವು ಹೆಚ್ಚಿಸುವ ನಿಟ್ಟಿನಲ್ಲಿ ಇಂತಹ ಸಾಹಿತ್ಯಿಕ ಚರ್ಚೆಗಳು ಹೆಚ್ಚು ಮಹತ್ವ ಪಡೆದಿವೆ ಎಂದರು.

ಪ್ರಾಂಶುಪಾಲ ಪ್ರೊ.ಆರ್.ಎನ್.ಪಂಚಾಕ್ಷರಯ್ಯ ಅಧ್ಯಕ್ಷತೆ ವಹಿಸಿದ್ದರು. ಮಂಜುಳಾ ಹುಲಿಕುಂಟೆ ಹಾಗೂ ಪ್ರೊ.ಕೆ.ಆರ್.ರವಿಕಿರಣ್ ತಮ್ಮ ಸ್ವರಚಿತ ಕವನಗಳನ್ನು ವಾಚಿಸಿದರು. ವಿದ್ಯಾರ್ಥಿಗಳೊಂದಿಗೆ ಸಾಹತ್ಯ ಸಂವಾದ ನಡೆಯಿತು.

ಕನ್ನಡ ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

8 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago