ಶ್ರೀ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂವಾದ

ಆಧುನಿಕ ಮಾಧ್ಯಮಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಪುಸ್ತಕದ ಓದು ನೀಡುವ ಆತ್ಮೀಯ ಭಾವ ಅನನ್ಯವಾಗಿಯೇ ಉಳಿದಿದೆ ಎಂದು ಕವಯತ್ರಿ ಮಂಜುಳಾ ಹುಲಿಕುಂಟೆ ಹೇಳಿದರು.

ಇಲ್ಲಿನ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಅರಿವು ಸಾಹಿತ್ಯ ವೇದಿಕೆಯ ನೇತೃತ್ವದಲ್ಲಿ ನಡೆದ ಸಾಹಿತ್ಯ ಚರ್ಚೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿಯ ಆಯಾಮಗಳು ಭಿನ್ನವಾಗಿರುತ್ತವೆ. ಸಮಕಾಲೀನ ಬರೆಹಗಾರರ ಬರೆಹಗಳು ಅವರನ್ನು ತಲುಪಬೇಕು. ಕೃತಕ ಬುದ್ದಿಮತ್ತೆಯ ಯುಗದಲ್ಲಿ ಸೃಜನಶೀಲತೆಯೂ ಸರಕಾಗುತ್ತಿದೆ. ಆದರೆ ಮನುಷ್ಯ ಸಂವೇದನೆಯನ್ನು ಪ್ರಜ್ಞಾಪೂರ್ವಕವಾಗಿ ಬಳಸಿಕೊಳ್ಳುವ ಕೆಲಸ ಆಗಬೇಕು. ಬದಲಾಗುತ್ತಿರುವ ಸಾಮಾಜಿಕ ಸಂದರ್ಭಗಳಲ್ಲಿ ಸಾಹಿತ್ಯದ ಪ್ರಭಾವ ಹಾಗೂ ಔಚಿತ್ಯದ ಕುರಿತು ಅಕಾಡೆಮಿಕ್‌ ಆದ ಚರ್ಚೆಗಳು ಅಗತ್ಯ. ಎಲ್ಲ ಕಾಲಕ್ಕೂ ಸಲ್ಲುವ ಮತ್ತು ಎಲ್ಲರನ್ನೂ ಒಳಗೊಳ್ಳುವ ಚಿಂತನೆಗಳ ಬಗ್ಗೆ ಮರು ವಿಮರ್ಶೆ ಅಗತ್ಯವಿದೆ ಎಂದರು.

*ಸಾಹಿತ್ಯ ಸಂವೇದನಾಶೀಲ ವ್ಯಕ್ತಿತ್ವದ ಜತೆಗಾರ:*

ಸಾಹಿತ್ಯ ಸಂವೇದನೆಯ ಒಳನೋಟಗಳ ಕುರಿತು ಮಾತನಾಡಿದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ರವಿಕಿರಣ್ ಕೆ.ಆರ್, ಸಾಹಿತ್ಯದ ಓದು ವ್ಯಕ್ತಿಯನ್ನು ಎಂದಿಗೂ ಏಕಾಂಗಿಯಾಗಿರಲು ಬಿಡುವುದಿಲ್ಲ. ಸಾಹಿತ್ಯ ಸಂವೇದನಾಶೀಲ ವ್ಯಕ್ತಿತ್ವದ ನೈಜ ಜತೆಗಾರನಿದ್ದಂತೆ. ಭಾವನೆಗಳ ಅನನ್ಯತೆ ಅರಿತರೆ ಸಂಬಂಧಗಳ ಮಹತ್ವ ತಿಳಿಯುತ್ತದೆ. ಸಾಹಿತ್ಯ ಗತಕಾಲದ ಸರಕು ಮಾತ್ರವಾಗದೆ, ಸಮಾಜ ಹಾಗೂ ವರ್ತಮಾನದ ಕುರಿತ ಆಲೋಚನೆಗಳ ಜೊತೆಗೆ ಭವಿಷ್ಯದ ಬಗೆಗಿನ ಎಚ್ಚರಗಳನ್ನೂ ಒಳಗೊಂಡಿರುತ್ತದೆ ಎಂದರು.

ಯುವ ಮನಸ್ಸುಗಳಲ್ಲಿ ಮೂಡುವ ರಸಭಾವಗಳಿಗೆ ಅಕ್ಷರದ ರೂಪ ದೊರೆಯಬೇಕು. ಅನ್ನಿಸಿದ್ದನ್ನು ಹೇಳಿಬಿಡುವ ಮುಕ್ತತೆ ಸಾಹಿತಿಗೆ ಅಗತ್ಯ. ಕನ್ನಡದ ನಾಳೆಗಳ ಬಗ್ಗೆ ಚಿಂತಿಸುವ ಜತೆಗೆ ಸಶಕ್ತ ಚಿಂತನೆಗಳನ್ನು ಪ್ರಚೋದಿಸಿ, ಮಾನವೀಯ ಆಲೋಚನೆಗಳಿಗೆ ಮುಖಾಮುಖಿಯಾಗಿಸುವ ಪ್ರಕ್ರಿಯೆ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಕನ್ನಡ ವಿಭಾಗದ ಮುಖ್ಯಸ್ಥ ಪ್ರವೀಣ್‌ ತಳಗವಾರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಓದು ಮತ್ತು ಗ್ರಹಿಕೆಯ ಅರಿವು ಹೆಚ್ಚಿಸುವ ನಿಟ್ಟಿನಲ್ಲಿ ಇಂತಹ ಸಾಹಿತ್ಯಿಕ ಚರ್ಚೆಗಳು ಹೆಚ್ಚು ಮಹತ್ವ ಪಡೆದಿವೆ ಎಂದರು.

ಪ್ರಾಂಶುಪಾಲ ಪ್ರೊ.ಆರ್.ಎನ್.ಪಂಚಾಕ್ಷರಯ್ಯ ಅಧ್ಯಕ್ಷತೆ ವಹಿಸಿದ್ದರು. ಮಂಜುಳಾ ಹುಲಿಕುಂಟೆ ಹಾಗೂ ಪ್ರೊ.ಕೆ.ಆರ್.ರವಿಕಿರಣ್ ತಮ್ಮ ಸ್ವರಚಿತ ಕವನಗಳನ್ನು ವಾಚಿಸಿದರು. ವಿದ್ಯಾರ್ಥಿಗಳೊಂದಿಗೆ ಸಾಹತ್ಯ ಸಂವಾದ ನಡೆಯಿತು.

ಕನ್ನಡ ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

12 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

18 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

21 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

21 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

24 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

1 day ago