ಆಧುನಿಕ ಮಾಧ್ಯಮಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಪುಸ್ತಕದ ಓದು ನೀಡುವ ಆತ್ಮೀಯ ಭಾವ ಅನನ್ಯವಾಗಿಯೇ ಉಳಿದಿದೆ ಎಂದು ಕವಯತ್ರಿ ಮಂಜುಳಾ ಹುಲಿಕುಂಟೆ ಹೇಳಿದರು.
ಇಲ್ಲಿನ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಅರಿವು ಸಾಹಿತ್ಯ ವೇದಿಕೆಯ ನೇತೃತ್ವದಲ್ಲಿ ನಡೆದ ಸಾಹಿತ್ಯ ಚರ್ಚೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿಯ ಆಯಾಮಗಳು ಭಿನ್ನವಾಗಿರುತ್ತವೆ. ಸಮಕಾಲೀನ ಬರೆಹಗಾರರ ಬರೆಹಗಳು ಅವರನ್ನು ತಲುಪಬೇಕು. ಕೃತಕ ಬುದ್ದಿಮತ್ತೆಯ ಯುಗದಲ್ಲಿ ಸೃಜನಶೀಲತೆಯೂ ಸರಕಾಗುತ್ತಿದೆ. ಆದರೆ ಮನುಷ್ಯ ಸಂವೇದನೆಯನ್ನು ಪ್ರಜ್ಞಾಪೂರ್ವಕವಾಗಿ ಬಳಸಿಕೊಳ್ಳುವ ಕೆಲಸ ಆಗಬೇಕು. ಬದಲಾಗುತ್ತಿರುವ ಸಾಮಾಜಿಕ ಸಂದರ್ಭಗಳಲ್ಲಿ ಸಾಹಿತ್ಯದ ಪ್ರಭಾವ ಹಾಗೂ ಔಚಿತ್ಯದ ಕುರಿತು ಅಕಾಡೆಮಿಕ್ ಆದ ಚರ್ಚೆಗಳು ಅಗತ್ಯ. ಎಲ್ಲ ಕಾಲಕ್ಕೂ ಸಲ್ಲುವ ಮತ್ತು ಎಲ್ಲರನ್ನೂ ಒಳಗೊಳ್ಳುವ ಚಿಂತನೆಗಳ ಬಗ್ಗೆ ಮರು ವಿಮರ್ಶೆ ಅಗತ್ಯವಿದೆ ಎಂದರು.
*ಸಾಹಿತ್ಯ ಸಂವೇದನಾಶೀಲ ವ್ಯಕ್ತಿತ್ವದ ಜತೆಗಾರ:*
ಸಾಹಿತ್ಯ ಸಂವೇದನೆಯ ಒಳನೋಟಗಳ ಕುರಿತು ಮಾತನಾಡಿದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ರವಿಕಿರಣ್ ಕೆ.ಆರ್, ಸಾಹಿತ್ಯದ ಓದು ವ್ಯಕ್ತಿಯನ್ನು ಎಂದಿಗೂ ಏಕಾಂಗಿಯಾಗಿರಲು ಬಿಡುವುದಿಲ್ಲ. ಸಾಹಿತ್ಯ ಸಂವೇದನಾಶೀಲ ವ್ಯಕ್ತಿತ್ವದ ನೈಜ ಜತೆಗಾರನಿದ್ದಂತೆ. ಭಾವನೆಗಳ ಅನನ್ಯತೆ ಅರಿತರೆ ಸಂಬಂಧಗಳ ಮಹತ್ವ ತಿಳಿಯುತ್ತದೆ. ಸಾಹಿತ್ಯ ಗತಕಾಲದ ಸರಕು ಮಾತ್ರವಾಗದೆ, ಸಮಾಜ ಹಾಗೂ ವರ್ತಮಾನದ ಕುರಿತ ಆಲೋಚನೆಗಳ ಜೊತೆಗೆ ಭವಿಷ್ಯದ ಬಗೆಗಿನ ಎಚ್ಚರಗಳನ್ನೂ ಒಳಗೊಂಡಿರುತ್ತದೆ ಎಂದರು.
ಯುವ ಮನಸ್ಸುಗಳಲ್ಲಿ ಮೂಡುವ ರಸಭಾವಗಳಿಗೆ ಅಕ್ಷರದ ರೂಪ ದೊರೆಯಬೇಕು. ಅನ್ನಿಸಿದ್ದನ್ನು ಹೇಳಿಬಿಡುವ ಮುಕ್ತತೆ ಸಾಹಿತಿಗೆ ಅಗತ್ಯ. ಕನ್ನಡದ ನಾಳೆಗಳ ಬಗ್ಗೆ ಚಿಂತಿಸುವ ಜತೆಗೆ ಸಶಕ್ತ ಚಿಂತನೆಗಳನ್ನು ಪ್ರಚೋದಿಸಿ, ಮಾನವೀಯ ಆಲೋಚನೆಗಳಿಗೆ ಮುಖಾಮುಖಿಯಾಗಿಸುವ ಪ್ರಕ್ರಿಯೆ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.
ಕನ್ನಡ ವಿಭಾಗದ ಮುಖ್ಯಸ್ಥ ಪ್ರವೀಣ್ ತಳಗವಾರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಓದು ಮತ್ತು ಗ್ರಹಿಕೆಯ ಅರಿವು ಹೆಚ್ಚಿಸುವ ನಿಟ್ಟಿನಲ್ಲಿ ಇಂತಹ ಸಾಹಿತ್ಯಿಕ ಚರ್ಚೆಗಳು ಹೆಚ್ಚು ಮಹತ್ವ ಪಡೆದಿವೆ ಎಂದರು.
ಪ್ರಾಂಶುಪಾಲ ಪ್ರೊ.ಆರ್.ಎನ್.ಪಂಚಾಕ್ಷರಯ್ಯ ಅಧ್ಯಕ್ಷತೆ ವಹಿಸಿದ್ದರು. ಮಂಜುಳಾ ಹುಲಿಕುಂಟೆ ಹಾಗೂ ಪ್ರೊ.ಕೆ.ಆರ್.ರವಿಕಿರಣ್ ತಮ್ಮ ಸ್ವರಚಿತ ಕವನಗಳನ್ನು ವಾಚಿಸಿದರು. ವಿದ್ಯಾರ್ಥಿಗಳೊಂದಿಗೆ ಸಾಹತ್ಯ ಸಂವಾದ ನಡೆಯಿತು.
ಕನ್ನಡ ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…