ಕಾಮೇನಹಳ್ಳಿ(ದೊಡ್ಡಬಳ್ಳಾಪುರ): ತಾಲೂಕಿನ ಸಾಸಲು ಹೋಬಳಿಯಲ್ಲಿನ ಕಾಮೇನಹಳ್ಳಿಯ ಇತಿಹಾಸ ಪ್ರಸಿದ್ಧ ಗುಟ್ಟೆ ಲಕ್ಷ್ಮೀನರಸಿಂಹ ಸ್ವಾಮಿ ಸನ್ನಿಧಿಯಲ್ಲಿ ರಥೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು.
ಲಕ್ಷ್ಮೀನರಸಿಂಹ ಸ್ವಾಮಿಯ ಉತ್ಸವ ಮೂರ್ತಿ ಹೊತ್ತ ರಥವನ್ನು ಜಯಘೋಷಣೆಗಳೊಂದಿಗೆ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ, ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ನಂತರ 12.05 ನಿಮಿಷಕ್ಕೆ ಸರಿಯಾಗಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಯ ಜಯಘೋಷಣೆಗಳನ್ನು ಕೂಗುವುದರ ಮೂಲಕ ರಥವನ್ನು ಎಳೆಯಲಾಯಿತು. ಉತ್ಸವ ಮೂರ್ತಿ ಹೊತ್ತ ತೇರಿಗೆ ಭಕ್ತರು ಭಕ್ತಿಯಿಂದ ಬಾಳೆಹಣ್ಣು, ದವನ ಸಮರ್ಪಿಸಿ ಭಕ್ತಿ ಮೆರೆದರು.
ಇದೇ ಮೊದಲ ಬಾರಿಗೆ ಗುಟ್ಟೆ ಶ್ರೀ ಲಕ್ಷ್ಮೀ ನರಸಿಹ ಸ್ವಾಮಿ ರಥೋತ್ಸವ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು. ವಿವಿಧ ಜಿಲ್ಲೆಗಳು, ಅಕ್ಕಪಕ್ಕದ ತಾಲೂಕುಗಳಿಂದ ಭಕ್ತ ಸಾಗರ ಹರಿದುಬಂದು ದೇವರ ದರ್ಶನ ಪಡೆದರು.
ಡೊಳ್ಳು ಕುಣಿತ, ಕೀಲುಕುದುರೆ ಕುಣಿತ, ಕಂಸಾಳೆ ನೃತ್ಯ ಪ್ರದರ್ಶನಗಳು ನೋಡುಗರ ಕಣ್ಮನ ಸೆಳೆದವು. ಭಕ್ತ ಗಣಕ್ಕೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಇಲ್ಲಿ ಪ್ರತೀ ಶನಿವಾರ ಪೂಜೆ ಪುನಾಸ್ಕಾರಗಳನ್ನು ನಡೆಸಲಾಗುತ್ತದೆ. ಹುಣ್ಣಿಮೆ ಮತ್ತು ಶ್ರಾವಣ ಮಾಸದಲ್ಲಿ ಪ್ರತಿದಿನ ಪೂಜೆ ಪುರಸ್ಕಾರಗಳು ನಡೆಯಲಿದ್ದು ಸಾವಿರಾರು ಭಕ್ತಾದಿಗಳು ಬಂದು ದೇವರ ಕೃಪೆಗೆ ಪಾತ್ರರಾಗುತ್ತಾರೆ.
1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…
ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…