ಕಾಮೇನಹಳ್ಳಿ(ದೊಡ್ಡಬಳ್ಳಾಪುರ): ತಾಲೂಕಿನ ಸಾಸಲು ಹೋಬಳಿಯಲ್ಲಿನ ಕಾಮೇನಹಳ್ಳಿಯ ಇತಿಹಾಸ ಪ್ರಸಿದ್ಧ ಗುಟ್ಟೆ ಲಕ್ಷ್ಮೀನರಸಿಂಹ ಸ್ವಾಮಿ ಸನ್ನಿಧಿಯಲ್ಲಿ ರಥೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು.
ಲಕ್ಷ್ಮೀನರಸಿಂಹ ಸ್ವಾಮಿಯ ಉತ್ಸವ ಮೂರ್ತಿ ಹೊತ್ತ ರಥವನ್ನು ಜಯಘೋಷಣೆಗಳೊಂದಿಗೆ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ, ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ನಂತರ 12.05 ನಿಮಿಷಕ್ಕೆ ಸರಿಯಾಗಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಯ ಜಯಘೋಷಣೆಗಳನ್ನು ಕೂಗುವುದರ ಮೂಲಕ ರಥವನ್ನು ಎಳೆಯಲಾಯಿತು. ಉತ್ಸವ ಮೂರ್ತಿ ಹೊತ್ತ ತೇರಿಗೆ ಭಕ್ತರು ಭಕ್ತಿಯಿಂದ ಬಾಳೆಹಣ್ಣು, ದವನ ಸಮರ್ಪಿಸಿ ಭಕ್ತಿ ಮೆರೆದರು.
ಇದೇ ಮೊದಲ ಬಾರಿಗೆ ಗುಟ್ಟೆ ಶ್ರೀ ಲಕ್ಷ್ಮೀ ನರಸಿಹ ಸ್ವಾಮಿ ರಥೋತ್ಸವ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು. ವಿವಿಧ ಜಿಲ್ಲೆಗಳು, ಅಕ್ಕಪಕ್ಕದ ತಾಲೂಕುಗಳಿಂದ ಭಕ್ತ ಸಾಗರ ಹರಿದುಬಂದು ದೇವರ ದರ್ಶನ ಪಡೆದರು.
ಡೊಳ್ಳು ಕುಣಿತ, ಕೀಲುಕುದುರೆ ಕುಣಿತ, ಕಂಸಾಳೆ ನೃತ್ಯ ಪ್ರದರ್ಶನಗಳು ನೋಡುಗರ ಕಣ್ಮನ ಸೆಳೆದವು. ಭಕ್ತ ಗಣಕ್ಕೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಇಲ್ಲಿ ಪ್ರತೀ ಶನಿವಾರ ಪೂಜೆ ಪುನಾಸ್ಕಾರಗಳನ್ನು ನಡೆಸಲಾಗುತ್ತದೆ. ಹುಣ್ಣಿಮೆ ಮತ್ತು ಶ್ರಾವಣ ಮಾಸದಲ್ಲಿ ಪ್ರತಿದಿನ ಪೂಜೆ ಪುರಸ್ಕಾರಗಳು ನಡೆಯಲಿದ್ದು ಸಾವಿರಾರು ಭಕ್ತಾದಿಗಳು ಬಂದು ದೇವರ ಕೃಪೆಗೆ ಪಾತ್ರರಾಗುತ್ತಾರೆ.
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…