ಕಾಮೇನಹಳ್ಳಿ(ದೊಡ್ಡಬಳ್ಳಾಪುರ): ತಾಲೂಕಿನ ಸಾಸಲು ಹೋಬಳಿಯಲ್ಲಿನ ಕಾಮೇನಹಳ್ಳಿಯ ಇತಿಹಾಸ ಪ್ರಸಿದ್ಧ ಗುಟ್ಟೆ ಲಕ್ಷ್ಮೀನರಸಿಂಹ ಸ್ವಾಮಿ ಸನ್ನಿಧಿಯಲ್ಲಿ ರಥೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು.
ಲಕ್ಷ್ಮೀನರಸಿಂಹ ಸ್ವಾಮಿಯ ಉತ್ಸವ ಮೂರ್ತಿ ಹೊತ್ತ ರಥವನ್ನು ಜಯಘೋಷಣೆಗಳೊಂದಿಗೆ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ, ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ನಂತರ 12.05 ನಿಮಿಷಕ್ಕೆ ಸರಿಯಾಗಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಯ ಜಯಘೋಷಣೆಗಳನ್ನು ಕೂಗುವುದರ ಮೂಲಕ ರಥವನ್ನು ಎಳೆಯಲಾಯಿತು. ಉತ್ಸವ ಮೂರ್ತಿ ಹೊತ್ತ ತೇರಿಗೆ ಭಕ್ತರು ಭಕ್ತಿಯಿಂದ ಬಾಳೆಹಣ್ಣು, ದವನ ಸಮರ್ಪಿಸಿ ಭಕ್ತಿ ಮೆರೆದರು.
ಇದೇ ಮೊದಲ ಬಾರಿಗೆ ಗುಟ್ಟೆ ಶ್ರೀ ಲಕ್ಷ್ಮೀ ನರಸಿಹ ಸ್ವಾಮಿ ರಥೋತ್ಸವ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು. ವಿವಿಧ ಜಿಲ್ಲೆಗಳು, ಅಕ್ಕಪಕ್ಕದ ತಾಲೂಕುಗಳಿಂದ ಭಕ್ತ ಸಾಗರ ಹರಿದುಬಂದು ದೇವರ ದರ್ಶನ ಪಡೆದರು.
ಡೊಳ್ಳು ಕುಣಿತ, ಕೀಲುಕುದುರೆ ಕುಣಿತ, ಕಂಸಾಳೆ ನೃತ್ಯ ಪ್ರದರ್ಶನಗಳು ನೋಡುಗರ ಕಣ್ಮನ ಸೆಳೆದವು. ಭಕ್ತ ಗಣಕ್ಕೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಇಲ್ಲಿ ಪ್ರತೀ ಶನಿವಾರ ಪೂಜೆ ಪುನಾಸ್ಕಾರಗಳನ್ನು ನಡೆಸಲಾಗುತ್ತದೆ. ಹುಣ್ಣಿಮೆ ಮತ್ತು ಶ್ರಾವಣ ಮಾಸದಲ್ಲಿ ಪ್ರತಿದಿನ ಪೂಜೆ ಪುರಸ್ಕಾರಗಳು ನಡೆಯಲಿದ್ದು ಸಾವಿರಾರು ಭಕ್ತಾದಿಗಳು ಬಂದು ದೇವರ ಕೃಪೆಗೆ ಪಾತ್ರರಾಗುತ್ತಾರೆ.
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…