ಶ್ರೀ ಕ್ಷೇತ್ರ ಗುಟ್ಟೆ ಲಕ್ಷ್ಮೀನರಸಿಂಹಸ್ವಾಮಿ‌ಯ ಮೊದಲ ಅದ್ಧೂರಿ ಜಾತ್ರಾ ಮಹೋತ್ಸವ

ಕಾಮೇನಹಳ್ಳಿ(ದೊಡ್ಡಬಳ್ಳಾಪುರ): ತಾಲೂಕಿನ ಸಾಸಲು ಹೋಬಳಿಯಲ್ಲಿನ ಕಾಮೇನಹಳ್ಳಿಯ ಇತಿಹಾಸ ಪ್ರಸಿದ್ಧ ಗುಟ್ಟೆ ಲಕ್ಷ್ಮೀನರಸಿಂಹ ಸ್ವಾಮಿ ಸನ್ನಿಧಿಯಲ್ಲಿ ರಥೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು.

ಲಕ್ಷ್ಮೀನರಸಿಂಹ ಸ್ವಾಮಿಯ ಉತ್ಸವ ಮೂರ್ತಿ ಹೊತ್ತ ರಥವನ್ನು ಜಯಘೋಷಣೆಗಳೊಂದಿಗೆ‌ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ, ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ನಂತರ 12.05 ನಿಮಿಷಕ್ಕೆ ಸರಿಯಾಗಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಯ ಜಯಘೋಷಣೆಗಳನ್ನು ಕೂಗುವುದರ ಮೂಲಕ ರಥವನ್ನು ಎಳೆಯಲಾಯಿತು. ಉತ್ಸವ ಮೂರ್ತಿ ಹೊತ್ತ ತೇರಿಗೆ ಭಕ್ತರು ಭಕ್ತಿಯಿಂದ ಬಾಳೆಹಣ್ಣು, ದವನ ಸಮರ್ಪಿಸಿ ಭಕ್ತಿ‌ ಮೆರೆದರು.

ಇದೇ ಮೊದಲ ಬಾರಿಗೆ ಗುಟ್ಟೆ ಶ್ರೀ ಲಕ್ಷ್ಮೀ ನರಸಿಹ ಸ್ವಾಮಿ ರಥೋತ್ಸವ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು. ವಿವಿಧ ಜಿಲ್ಲೆಗಳು, ಅಕ್ಕಪಕ್ಕದ ತಾಲೂಕುಗಳಿಂದ ಭಕ್ತ ಸಾಗರ ಹರಿದುಬಂದು ದೇವರ ದರ್ಶನ ಪಡೆದರು.

ಡೊಳ್ಳು ಕುಣಿತ, ಕೀಲುಕುದುರೆ ಕುಣಿತ, ಕಂಸಾಳೆ ನೃತ್ಯ ಪ್ರದರ್ಶನಗಳು ನೋಡುಗರ ಕಣ್ಮನ ಸೆಳೆದವು. ಭಕ್ತ ಗಣಕ್ಕೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ದೊಡ್ಡಬಳ್ಳಾಪುರದಿಂದ ಸುಮಾರು 25ಕಿಮೀ, ಸಾಸಲು ಹಾಗೂ ಆರೂಢಿಯಿಂದ ಸುಮಾರು 7 ಕಿಮೀ ದೂರದಲ್ಲಿರುವ ಗುಟ್ಟೆ ಲಕ್ಷ್ಮೀನರಸಿಂಹಸ್ವಾಮಿ ಧಾರ್ಮಿಕ ಸ್ಥಳವಾಗಿ ಪ್ರಖ್ಯಾತವಾಗಿದ್ದು, ಸುಮಾರು ವರ್ಷಗಳ ಹಿಂದೆ ಸ್ಥಾಪಿತವಾದ ದೇವಸ್ಥಾನ ದಿನೇದಿನೆ ಅಭಿವೃದ್ಧಿಗೊಂಡು ಈಗ ಬೆಟ್ಟದೆ ಮೇಲೆ ಸುಸಜ್ಜಿತ ದೇಗುಲ ಹೊಂದಿದೆ. ಸುಂದರವಾದ ಗೋಪುರ, ಕಲ್ಲು ಮಂಟಪದ ಆವರಣವಿರುವ ಗರ್ಭಗುಡಿಯಲ್ಲಿ ಮೂಲ ವಿಗ್ರಹದೊಂದಿಗೆ ಗುಟ್ಟೆ ಲಕ್ಷ್ಮೀನರಸಿಂಹ ಸ್ವಾಮಿ ಮತ್ತು ಕೆಳಗಡೆ ಲಕ್ಷ್ಮಮ್ಮ ಮತ್ತು ಆಂಜಿನೇಯ ದೇವರುಗಳನ್ನು ಪ್ರತಿಷ್ಠಾಪಿಸಲಾಗಿದೆ.

ಇಲ್ಲಿ ಪ್ರತೀ ಶನಿವಾರ ಪೂಜೆ ಪುನಾಸ್ಕಾರಗಳನ್ನು ನಡೆಸಲಾಗುತ್ತದೆ. ಹುಣ್ಣಿಮೆ ಮತ್ತು ಶ್ರಾವಣ ಮಾಸದಲ್ಲಿ ಪ್ರತಿದಿನ ಪೂಜೆ ಪುರಸ್ಕಾರಗಳು ನಡೆಯಲಿದ್ದು ಸಾವಿರಾರು ಭಕ್ತಾದಿಗಳು ಬಂದು ದೇವರ ಕೃಪೆಗೆ ಪಾತ್ರರಾಗುತ್ತಾರೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

34 minutes ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

1 hour ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

6 hours ago

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

11 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

22 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

1 day ago