ಶ್ರೀ ಕ್ಷೇತ್ರ ಗುಟ್ಟೆ ಲಕ್ಷ್ಮೀನರಸಿಂಹಸ್ವಾಮಿ‌ಯ ಮೊದಲ ಅದ್ಧೂರಿ ಜಾತ್ರಾ ಮಹೋತ್ಸವ

ಕಾಮೇನಹಳ್ಳಿ(ದೊಡ್ಡಬಳ್ಳಾಪುರ): ತಾಲೂಕಿನ ಸಾಸಲು ಹೋಬಳಿಯಲ್ಲಿನ ಕಾಮೇನಹಳ್ಳಿಯ ಇತಿಹಾಸ ಪ್ರಸಿದ್ಧ ಗುಟ್ಟೆ ಲಕ್ಷ್ಮೀನರಸಿಂಹ ಸ್ವಾಮಿ ಸನ್ನಿಧಿಯಲ್ಲಿ ರಥೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು.

ಲಕ್ಷ್ಮೀನರಸಿಂಹ ಸ್ವಾಮಿಯ ಉತ್ಸವ ಮೂರ್ತಿ ಹೊತ್ತ ರಥವನ್ನು ಜಯಘೋಷಣೆಗಳೊಂದಿಗೆ‌ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ, ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ನಂತರ 12.05 ನಿಮಿಷಕ್ಕೆ ಸರಿಯಾಗಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಯ ಜಯಘೋಷಣೆಗಳನ್ನು ಕೂಗುವುದರ ಮೂಲಕ ರಥವನ್ನು ಎಳೆಯಲಾಯಿತು. ಉತ್ಸವ ಮೂರ್ತಿ ಹೊತ್ತ ತೇರಿಗೆ ಭಕ್ತರು ಭಕ್ತಿಯಿಂದ ಬಾಳೆಹಣ್ಣು, ದವನ ಸಮರ್ಪಿಸಿ ಭಕ್ತಿ‌ ಮೆರೆದರು.

ಇದೇ ಮೊದಲ ಬಾರಿಗೆ ಗುಟ್ಟೆ ಶ್ರೀ ಲಕ್ಷ್ಮೀ ನರಸಿಹ ಸ್ವಾಮಿ ರಥೋತ್ಸವ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು. ವಿವಿಧ ಜಿಲ್ಲೆಗಳು, ಅಕ್ಕಪಕ್ಕದ ತಾಲೂಕುಗಳಿಂದ ಭಕ್ತ ಸಾಗರ ಹರಿದುಬಂದು ದೇವರ ದರ್ಶನ ಪಡೆದರು.

ಡೊಳ್ಳು ಕುಣಿತ, ಕೀಲುಕುದುರೆ ಕುಣಿತ, ಕಂಸಾಳೆ ನೃತ್ಯ ಪ್ರದರ್ಶನಗಳು ನೋಡುಗರ ಕಣ್ಮನ ಸೆಳೆದವು. ಭಕ್ತ ಗಣಕ್ಕೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ದೊಡ್ಡಬಳ್ಳಾಪುರದಿಂದ ಸುಮಾರು 25ಕಿಮೀ, ಸಾಸಲು ಹಾಗೂ ಆರೂಢಿಯಿಂದ ಸುಮಾರು 7 ಕಿಮೀ ದೂರದಲ್ಲಿರುವ ಗುಟ್ಟೆ ಲಕ್ಷ್ಮೀನರಸಿಂಹಸ್ವಾಮಿ ಧಾರ್ಮಿಕ ಸ್ಥಳವಾಗಿ ಪ್ರಖ್ಯಾತವಾಗಿದ್ದು, ಸುಮಾರು ವರ್ಷಗಳ ಹಿಂದೆ ಸ್ಥಾಪಿತವಾದ ದೇವಸ್ಥಾನ ದಿನೇದಿನೆ ಅಭಿವೃದ್ಧಿಗೊಂಡು ಈಗ ಬೆಟ್ಟದೆ ಮೇಲೆ ಸುಸಜ್ಜಿತ ದೇಗುಲ ಹೊಂದಿದೆ. ಸುಂದರವಾದ ಗೋಪುರ, ಕಲ್ಲು ಮಂಟಪದ ಆವರಣವಿರುವ ಗರ್ಭಗುಡಿಯಲ್ಲಿ ಮೂಲ ವಿಗ್ರಹದೊಂದಿಗೆ ಗುಟ್ಟೆ ಲಕ್ಷ್ಮೀನರಸಿಂಹ ಸ್ವಾಮಿ ಮತ್ತು ಕೆಳಗಡೆ ಲಕ್ಷ್ಮಮ್ಮ ಮತ್ತು ಆಂಜಿನೇಯ ದೇವರುಗಳನ್ನು ಪ್ರತಿಷ್ಠಾಪಿಸಲಾಗಿದೆ.

ಇಲ್ಲಿ ಪ್ರತೀ ಶನಿವಾರ ಪೂಜೆ ಪುನಾಸ್ಕಾರಗಳನ್ನು ನಡೆಸಲಾಗುತ್ತದೆ. ಹುಣ್ಣಿಮೆ ಮತ್ತು ಶ್ರಾವಣ ಮಾಸದಲ್ಲಿ ಪ್ರತಿದಿನ ಪೂಜೆ ಪುರಸ್ಕಾರಗಳು ನಡೆಯಲಿದ್ದು ಸಾವಿರಾರು ಭಕ್ತಾದಿಗಳು ಬಂದು ದೇವರ ಕೃಪೆಗೆ ಪಾತ್ರರಾಗುತ್ತಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

5 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

6 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

19 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago