ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದ ಮಾರ್ಗದಲ್ಲಿನ ತಿರುಮಗೊಂಡನಹಳ್ಳಿ ಬಳಿ ರೈಲ್ವೆ ಗೇಟ್ ಇದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಅಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲು ಕೋರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಶ್ಣವ್ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಕುರಿತು ಪರಿಶೀಲನೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದ್ದಾರೆ.
ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಸಂಪರ್ಕಿಸುವ ರಸ್ತೆಗೆ ಅಡ್ಡವಾಗಿ ರೈಲು ಮಾರ್ಗ ಹಾದು ಹೋಗಿದ್ದು, ರೈಲ್ವೆ ಗೇಟ್ ಬಂದ್ ಮಾಡುವುದರಿಂದ ಕ್ಷೇತ್ರಕ್ಕೆ ಹೋಗುವ ಸಾವಿರಾರು ಭಕ್ತರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಸಮಸ್ಯೆಯನ್ನ ಅನುಭವಿಸುತ್ತಿದ್ದಾರೆ, ಭಕ್ತರ ಅನುಕೂಲಕ್ಕಾಗಿ ತಿರುಮಗೊಂಡನಹಳ್ಳಿಯ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸುವಂತೆ ಸಂಸದ ಡಾ.ಕೆ.ಸುಧಾಕರ್ ಅವರು ದಿನಾಂಕ 05-09-2024ರಂದು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಬೆಂಗಳೂರು-ದೆಹಲಿ ರೈಲ್ವೆ ಮಾರ್ಗವಾಗಿದ್ದು, ಪ್ರತಿದಿನ 60 ರಿಂದ 70ಕ್ಕೂ ರೈಲುಗಳು ಸಂಚರಿಸುತ್ತವೆ, ಪ್ರತಿ ಅರ್ಧ ಗಂಟೆಗೊಮ್ಮೆ ರೈಲುಗಳು ಸಂಚಾರಿಸುವದರಿಂದ ರೈಲ್ವೆ ಗೇಟ್ ಹಾಕಿ ರಸ್ತೆ ಬಂದ್ ಮಾಡಲಾಗುತ್ತದೆ, ಇದರಿಂದ ಸುಮಾರು 10 ರಿಂದ 15 ನಿಮಿಷ ರೈಲ್ವೆ ಗೇಟ್ ಬಳಿ ಕಾಯಬೇಕಾದ ಸ್ಥಿತಿ ಇದೆ. ರೈಲ್ವೆ ಗೇಟ್ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸಿ ಬೇಕೆಂಬುದು ಸ್ಥಳೀಯರು ಬಹುದಿನದ ಬೇಡಿಕೆಯಾಗಿತ್ತು. ಇದೀಗ ಪ್ರಯಾಣಿಕರ ಅನುಕೂಲಕ್ಕಾಗಿ ಅಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಶ್ಣವ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಈ ಬಗ್ಗೆ ಸಂಸದ ಡಾ.ಕೆ.ಸುಧಾಕರ್ ಅವರು ಸಚಿವರು ಪ್ರತಿಕ್ರಿಯೆ ನೀಡಿರುವ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…