ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದ ಮಾರ್ಗದಲ್ಲಿನ ತಿರುಮಗೊಂಡನಹಳ್ಳಿ ರೈಲ್ವೆ ಗೇಟ್ ಬಳಿ‌ ಮೇಲ್ಸೇತುವೆ ನಿರ್ಮಿಸಲು ಕೋರಿ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಡಾ.ಕೆ.ಸುಧಾಕರ್ ಮನವಿ: ಕೇಂದ್ರ ರೈಲ್ವೆ ಸಚಿವ‌ರಿಂದ ಸಕಾರಾತ್ಮಕ ಸ್ಪಂದನೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದ ಮಾರ್ಗದಲ್ಲಿನ ತಿರುಮಗೊಂಡನಹಳ್ಳಿ ಬಳಿ ರೈಲ್ವೆ ಗೇಟ್ ಇದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಅಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲು ಕೋರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಶ್ಣವ್ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಕುರಿತು ಪರಿಶೀಲನೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದ್ದಾರೆ.

ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಸಂಪರ್ಕಿಸುವ ರಸ್ತೆಗೆ ಅಡ್ಡವಾಗಿ ರೈಲು ಮಾರ್ಗ ಹಾದು ಹೋಗಿದ್ದು, ರೈಲ್ವೆ ಗೇಟ್ ಬಂದ್ ಮಾಡುವುದರಿಂದ ಕ್ಷೇತ್ರಕ್ಕೆ ಹೋಗುವ ಸಾವಿರಾರು ಭಕ್ತರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಸಮಸ್ಯೆಯನ್ನ ಅನುಭವಿಸುತ್ತಿದ್ದಾರೆ, ಭಕ್ತರ ಅನುಕೂಲಕ್ಕಾಗಿ ತಿರುಮಗೊಂಡನಹಳ್ಳಿಯ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸುವಂತೆ ಸಂಸದ ಡಾ.ಕೆ.ಸುಧಾಕರ್ ಅವರು ದಿನಾಂಕ 05-09-2024ರಂದು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಬೆಂಗಳೂರು-ದೆಹಲಿ ರೈಲ್ವೆ ಮಾರ್ಗವಾಗಿದ್ದು, ಪ್ರತಿದಿನ 60 ರಿಂದ 70ಕ್ಕೂ ರೈಲುಗಳು ಸಂಚರಿಸುತ್ತವೆ, ಪ್ರತಿ ಅರ್ಧ ಗಂಟೆಗೊಮ್ಮೆ ರೈಲುಗಳು ಸಂಚಾರಿಸುವದರಿಂದ ರೈಲ್ವೆ ಗೇಟ್ ಹಾಕಿ ರಸ್ತೆ ಬಂದ್ ಮಾಡಲಾಗುತ್ತದೆ, ಇದರಿಂದ ಸುಮಾರು 10 ರಿಂದ 15 ನಿಮಿಷ ರೈಲ್ವೆ ಗೇಟ್ ಬಳಿ ಕಾಯಬೇಕಾದ ಸ್ಥಿತಿ ಇದೆ. ರೈಲ್ವೆ ಗೇಟ್ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸಿ ಬೇಕೆಂಬುದು ಸ್ಥಳೀಯರು ಬಹುದಿನದ ಬೇಡಿಕೆಯಾಗಿತ್ತು. ಇದೀಗ ಪ್ರಯಾಣಿಕರ ಅನುಕೂಲಕ್ಕಾಗಿ ಅಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಶ್ಣವ್‌ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಈ ಬಗ್ಗೆ ಸಂಸದ ಡಾ.ಕೆ.ಸುಧಾಕರ್ ಅವರು ಸಚಿವರು ಪ್ರತಿಕ್ರಿಯೆ ನೀಡಿರುವ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

3 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

14 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

15 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

20 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

1 day ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 days ago