ಈ ವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯ ಈ ದಿನ ಶುಕ್ರವಾರದಂದು ಸಿದ್ಧಿಯೋಗದಲ್ಲಿ ನಾಗರ ಪಂಚಮಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ನಾಡಿನೆಲ್ಲೆಡೆ ನಾಗರ ಪಂಚಮಿ ಹಬ್ಬದ ಸಂಭ್ರಮ ಸಡಗರ ಮನೆ ಮಾಡಿದೆ. ನಾಗ ದೋಷದಿಂದ ಮುಕ್ತಿ ಪಡೆಯಲು ಭಕ್ತರು ನಾಗರ ವಿಗ್ರಹಗಳು, ಹುತ್ತಗಳಿಗೆ ವಿಶೇಷ ಪೂಜೆ ಪುನಸ್ಕಾರ ಮಾಡುವಲ್ಲಿ ನಿರತರಾಗಿದ್ದಾರೆ.
ಅದೇರೀತಿ ನಾಗಾರಾಧನೆಗೆ ಹೆಚ್ಚು ಪ್ರಸಿದ್ಧಿ ಪಡೆದಿರುವ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಸ್ಥಾನದಲ್ಲಿಂದು ನಾಗರ ಪಂಚಮಿ ಪ್ರಯುಕ್ತ ನಾಗರಕಲ್ಲುಗಳು ಹಾಗೂ ಹುತ್ತಗಳಿಗೆ ಹಾಲಿನ ಅಭಿಷೇಕ, ತುಪ್ಪದ ಅಭಿಷೇಕ ಸೇರಿದಂತೆ ಇನ್ನಿತರೆ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.
ಪ್ರತಿ ವರ್ಷ ನಾಗರಪಂಚಮಿ ದಿನದಂದು ನಾಗರ ಕಲ್ಲುಗಳನ್ನು ಶುದ್ಧ ನೀರಿನಿಂದ ತೊಳೆದು ಅರಿಶಿನ, ಕುಂಕುಮ, ಹೂವಿಟ್ಟು ನಂತರ ನಾಗರ ಕಲ್ಲಿಗೆ ಹಾಲೆರೆದರೆ ಸರ್ಪದೋಷ ನಿವಾರಣೆಯಾಗಲಿದೆ ಎಂಬ ನಂಬಿಕೆ ಹಿನ್ನೆಲೆ ನಾಗ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…