ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ನಾಗರ ಪಂಚಮಿ ಸಂಪನ್ನ: ಸರ್ಪದೋಷ ಮುಕ್ತಿಗಾಗಿ ನಾಗದೇವರ ಮೊರೆ ಹೋದ ಭಕ್ತರು

ಈ ವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯ ಈ ದಿನ ಶುಕ್ರವಾರದಂದು ಸಿದ್ಧಿಯೋಗದಲ್ಲಿ ನಾಗರ ಪಂಚಮಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ನಾಡಿನೆಲ್ಲೆಡೆ ನಾಗರ ಪಂಚಮಿ ಹಬ್ಬದ ಸಂಭ್ರಮ ಸಡಗರ ಮನೆ ಮಾಡಿದೆ. ನಾಗ ದೋಷದಿಂದ ಮುಕ್ತಿ ಪಡೆಯಲು ಭಕ್ತರು ನಾಗರ ವಿಗ್ರಹಗಳು, ಹುತ್ತಗಳಿಗೆ ವಿಶೇಷ ಪೂಜೆ ಪುನಸ್ಕಾರ ಮಾಡುವಲ್ಲಿ ನಿರತರಾಗಿದ್ದಾರೆ.

ಅದೇರೀತಿ ನಾಗಾರಾಧನೆಗೆ ಹೆಚ್ಚು ಪ್ರಸಿದ್ಧಿ ಪಡೆದಿರುವ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಸ್ಥಾನದಲ್ಲಿಂದು ನಾಗರ ಪಂಚಮಿ ಪ್ರಯುಕ್ತ ನಾಗರಕಲ್ಲುಗಳು ಹಾಗೂ ಹುತ್ತಗಳಿಗೆ ಹಾಲಿನ ಅಭಿಷೇಕ, ತುಪ್ಪದ ಅಭಿಷೇಕ ಸೇರಿದಂತೆ ಇನ್ನಿತರೆ ವಿಶೇಷ ಪೂಜೆಗಳನ್ನು‌ ನೆರವೇರಿಸಲಾಯಿತು.

ಪ್ರತಿ ವರ್ಷ ನಾಗರಪಂಚಮಿ ದಿನದಂದು ನಾಗರ ಕಲ್ಲುಗಳನ್ನು ಶುದ್ಧ ನೀರಿನಿಂದ ತೊಳೆದು ಅರಿಶಿನ, ಕುಂಕುಮ, ಹೂವಿಟ್ಟು ನಂತರ ನಾಗರ ಕಲ್ಲಿಗೆ ಹಾಲೆರೆದರೆ ಸರ್ಪದೋಷ ನಿವಾರಣೆಯಾಗಲಿದೆ ಎಂಬ ನಂಬಿಕೆ ಹಿನ್ನೆಲೆ ನಾಗ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.

ಘಾಟಿ ಕ್ಷೇತ್ರದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ನಾಗರಕಲ್ಲುಗಳನ್ನು ಪ್ರತಿಷ್ಠಾಪಿಸಲಾಗಿದೆ. ಈ ಎಲ್ಲಾ ಕಲ್ಲುಗಳಿಗೆ ಭಕ್ತರು ಅರಿಶಿನ, ಕುಂಕುಮ ಹಚ್ಚಿ ವಿಶೇಷ ಪೂಜೆ ನಡೆಸಿ ದೇವರ ಕೃಪೆಗೆ ಪಾತ್ರರಾದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

13 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

19 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago