ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ನಾಗರ ಪಂಚಮಿ ಸಂಪನ್ನ: ಸರ್ಪದೋಷ ಮುಕ್ತಿಗಾಗಿ ನಾಗದೇವರ ಮೊರೆ ಹೋದ ಭಕ್ತರು

ಈ ವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯ ಈ ದಿನ ಶುಕ್ರವಾರದಂದು ಸಿದ್ಧಿಯೋಗದಲ್ಲಿ ನಾಗರ ಪಂಚಮಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ನಾಡಿನೆಲ್ಲೆಡೆ ನಾಗರ ಪಂಚಮಿ ಹಬ್ಬದ ಸಂಭ್ರಮ ಸಡಗರ ಮನೆ ಮಾಡಿದೆ. ನಾಗ ದೋಷದಿಂದ ಮುಕ್ತಿ ಪಡೆಯಲು ಭಕ್ತರು ನಾಗರ ವಿಗ್ರಹಗಳು, ಹುತ್ತಗಳಿಗೆ ವಿಶೇಷ ಪೂಜೆ ಪುನಸ್ಕಾರ ಮಾಡುವಲ್ಲಿ ನಿರತರಾಗಿದ್ದಾರೆ.

ಅದೇರೀತಿ ನಾಗಾರಾಧನೆಗೆ ಹೆಚ್ಚು ಪ್ರಸಿದ್ಧಿ ಪಡೆದಿರುವ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಸ್ಥಾನದಲ್ಲಿಂದು ನಾಗರ ಪಂಚಮಿ ಪ್ರಯುಕ್ತ ನಾಗರಕಲ್ಲುಗಳು ಹಾಗೂ ಹುತ್ತಗಳಿಗೆ ಹಾಲಿನ ಅಭಿಷೇಕ, ತುಪ್ಪದ ಅಭಿಷೇಕ ಸೇರಿದಂತೆ ಇನ್ನಿತರೆ ವಿಶೇಷ ಪೂಜೆಗಳನ್ನು‌ ನೆರವೇರಿಸಲಾಯಿತು.

ಪ್ರತಿ ವರ್ಷ ನಾಗರಪಂಚಮಿ ದಿನದಂದು ನಾಗರ ಕಲ್ಲುಗಳನ್ನು ಶುದ್ಧ ನೀರಿನಿಂದ ತೊಳೆದು ಅರಿಶಿನ, ಕುಂಕುಮ, ಹೂವಿಟ್ಟು ನಂತರ ನಾಗರ ಕಲ್ಲಿಗೆ ಹಾಲೆರೆದರೆ ಸರ್ಪದೋಷ ನಿವಾರಣೆಯಾಗಲಿದೆ ಎಂಬ ನಂಬಿಕೆ ಹಿನ್ನೆಲೆ ನಾಗ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.

ಘಾಟಿ ಕ್ಷೇತ್ರದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ನಾಗರಕಲ್ಲುಗಳನ್ನು ಪ್ರತಿಷ್ಠಾಪಿಸಲಾಗಿದೆ. ಈ ಎಲ್ಲಾ ಕಲ್ಲುಗಳಿಗೆ ಭಕ್ತರು ಅರಿಶಿನ, ಕುಂಕುಮ ಹಚ್ಚಿ ವಿಶೇಷ ಪೂಜೆ ನಡೆಸಿ ದೇವರ ಕೃಪೆಗೆ ಪಾತ್ರರಾದರು.

Ramesh Babu

Journalist

Recent Posts

ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…

7 hours ago

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

1 day ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

1 day ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

1 day ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago