ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಗೋ ಪೂಜೆ ನಡೆಸಲು ಸರ್ಕಾರ ತೀರ್ಮಾನಿಸಲಾಗಿತ್ತು. ಅದರಂತೆ ಗೋಧೂಳಿ ಲಗ್ನದಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಗೋ ಪೂಜೆ ನೆರವೇರಿಸಲಾಯಿತು.
ಗೋವುಗಳಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತಂದಿದ್ದ ರೈತರು, ಅರಿಶಿಣ, ಕುಂಕುಮ ಹಚ್ಚಿ, ಹೂಗಳಿಂದ ಅಲಂಕರಿಸಿ, ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ನೀಡಿ ಗೋ ಪೂಜೆ ಮಾಡಲಾಯಿತು.
ಹಿಂದೂ ಧರ್ಮದಲ್ಲಿ ಗೋವುಗಳಿಗೆ ಮಾತೃ ಸ್ಥಾನವನ್ನು ಕೊಡಲಾಗಿದೆ. ದೀಪಾವಳಿಯ ಸಂದರ್ಭದಲ್ಲಿ ಗೋ ಪೂಜೆ ಅತ್ಯಂತ ಪ್ರಮುಖವಾದ ಪೂಜೆಗಳಲ್ಲೊಂದು. ದೀಪಾವಳಿ ಹಬ್ಬದಲ್ಲಿ ಗೋಪೂಜೆಗೆ ವಿಶೇಷ ಪ್ರಾಧಾನ್ಯತೆ ಇದೆ.
ಗೋ ಮಾತೆಯಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿದ್ದಾರೆಂದು ನಂಬಲಾಗುತ್ತದೆ. ಗೋ ಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುತ್ತವೆ ಎಂಬ ನಂಬಿಕೆ ಇದೆ.
ಈ ವೇಳೆ ದೇವಾಲಯದ ಕಾರ್ಯನಿರ್ವಾಹಕಾಧಿಕಾರಿ ನಾಗರಾಜ್, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…