ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಗೋ ಪೂಜೆ ನಡೆಸಲು ಸರ್ಕಾರ ತೀರ್ಮಾನಿಸಲಾಗಿತ್ತು. ಅದರಂತೆ ಗೋಧೂಳಿ ಲಗ್ನದಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಗೋ ಪೂಜೆ ನೆರವೇರಿಸಲಾಯಿತು.
ಗೋವುಗಳಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತಂದಿದ್ದ ರೈತರು, ಅರಿಶಿಣ, ಕುಂಕುಮ ಹಚ್ಚಿ, ಹೂಗಳಿಂದ ಅಲಂಕರಿಸಿ, ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ನೀಡಿ ಗೋ ಪೂಜೆ ಮಾಡಲಾಯಿತು.
ಹಿಂದೂ ಧರ್ಮದಲ್ಲಿ ಗೋವುಗಳಿಗೆ ಮಾತೃ ಸ್ಥಾನವನ್ನು ಕೊಡಲಾಗಿದೆ. ದೀಪಾವಳಿಯ ಸಂದರ್ಭದಲ್ಲಿ ಗೋ ಪೂಜೆ ಅತ್ಯಂತ ಪ್ರಮುಖವಾದ ಪೂಜೆಗಳಲ್ಲೊಂದು. ದೀಪಾವಳಿ ಹಬ್ಬದಲ್ಲಿ ಗೋಪೂಜೆಗೆ ವಿಶೇಷ ಪ್ರಾಧಾನ್ಯತೆ ಇದೆ.
ಗೋ ಮಾತೆಯಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿದ್ದಾರೆಂದು ನಂಬಲಾಗುತ್ತದೆ. ಗೋ ಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುತ್ತವೆ ಎಂಬ ನಂಬಿಕೆ ಇದೆ.
ಈ ವೇಳೆ ದೇವಾಲಯದ ಕಾರ್ಯನಿರ್ವಾಹಕಾಧಿಕಾರಿ ನಾಗರಾಜ್, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…