ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ‌ ದೇವಸ್ಥಾನದಲ್ಲಿ 2024ರ ಜನವರಿ 31ರಂದು ‘ಮಾಂಗಲ್ಯ ಭಾಗ್ಯ’ ಕಾರ್ಯಕ್ರಮ…. ಇನ್ನಷ್ಟು ಮಾಹಿತಿ‌ ಇಲ್ಲಿದೆ….

ಕರ್ನಾಟಕ ಸರ್ಕಾರ ಧಾರ್ಮಿಕ‌ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ತಾಲೂಕಿನ‌ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ‌ ದೇವಸ್ಥಾನಗಳಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ‘ಮಾಂಗಲ್ಯ ಭಾಗ್ಯ’ ಎಂಬ ಯೋಜನೆಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನ 2024ರ ಜನವರಿ 31ರ ಬೆಳಗ್ಗೆ 11:20 ರಿಂದ 12:20ರವರೆಗೆ ಅಭಿಜಿನ್ ಲಗ್ನದಲ್ಲಿ ಆಯೋಜಿಸಲಾಗಿದೆ.

ಮಾಂಗಲ್ಯ ಭಾಗ್ಯ ಶುಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ‌ 5 ಸಾವಿರ‌ ಹಾಗೂ ವಧುವಿಗೆ 10 ಸಾವಿರ ಸೇರಿದಂತೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು‌ ಹೀಗೆ ಒಟ್ಟು 55 ಸಾವಿರ ರೂ. ಗಳನ್ನ ದೇವಾಲಯದ ವತಿಯಿಂದ ಭರಿಸಲಾಗುವುದು.

ಅದೇರೀತಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಸಹ ದೇವಾಲಯ ವತಿಯಿಂದ ಮಾಡಲಾಗುವುದು.

ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಅರ್ಜಿಯನ್ನು ದೇವಾಲಯದ ಕಾರ್ಯನಿರ್ವಾಹ ಕಚೇರಿಯಲ್ಲಿ ಪಡೆದು ಜನವರಿ 20ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಿ ನೋಂದಾಸಿಕೊಳ್ಳಬೇಕಾಗಿದೆ.

ನೋಂದಾಯಿಸಿಕೊಂಡಿರುವ ವಧು-ವರರ ವಿವರಗಳನ್ನು ಜನವರಿ 23ರಂದು ದೇವಾಲಯದಲ್ಲಿ ಪ್ರಕಟಿಸಲಾಗುವುದು. ವಧು-ವರರ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ಜ. 25ರೊಳಗಾಗಿ ಸಲ್ಲಿಸಬೇಕಾಗಿದೆ. ಅಂತಿಮ ವಧು-ವರರ ಪಟ್ಟಿಯನ್ನ ಜ.27ರಂದು ಪ್ರಕಟಿಸಲಾಗುವುದು ಎಂದು ದೇವಾಲಯದ ಕಾರ್ಯನಿರ್ವಾಹಕ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ 9590300410, 9241297450, 9980907997ನ್ನು ಸಂಪರ್ಕಿಸಬಹುದಾಗಿದೆ.

Ramesh Babu

Journalist

Recent Posts

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

3 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

6 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

7 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

9 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

10 hours ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

11 hours ago