ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ‌ ದೇವಸ್ಥಾನದಲ್ಲಿ 2024ರ ಜನವರಿ 31ರಂದು ‘ಮಾಂಗಲ್ಯ ಭಾಗ್ಯ’ ಕಾರ್ಯಕ್ರಮ…. ಇನ್ನಷ್ಟು ಮಾಹಿತಿ‌ ಇಲ್ಲಿದೆ….

ಕರ್ನಾಟಕ ಸರ್ಕಾರ ಧಾರ್ಮಿಕ‌ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ತಾಲೂಕಿನ‌ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ‌ ದೇವಸ್ಥಾನಗಳಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ‘ಮಾಂಗಲ್ಯ ಭಾಗ್ಯ’ ಎಂಬ ಯೋಜನೆಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನ 2024ರ ಜನವರಿ 31ರ ಬೆಳಗ್ಗೆ 11:20 ರಿಂದ 12:20ರವರೆಗೆ ಅಭಿಜಿನ್ ಲಗ್ನದಲ್ಲಿ ಆಯೋಜಿಸಲಾಗಿದೆ.

ಮಾಂಗಲ್ಯ ಭಾಗ್ಯ ಶುಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ‌ 5 ಸಾವಿರ‌ ಹಾಗೂ ವಧುವಿಗೆ 10 ಸಾವಿರ ಸೇರಿದಂತೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು‌ ಹೀಗೆ ಒಟ್ಟು 55 ಸಾವಿರ ರೂ. ಗಳನ್ನ ದೇವಾಲಯದ ವತಿಯಿಂದ ಭರಿಸಲಾಗುವುದು.

ಅದೇರೀತಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಸಹ ದೇವಾಲಯ ವತಿಯಿಂದ ಮಾಡಲಾಗುವುದು.

ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಅರ್ಜಿಯನ್ನು ದೇವಾಲಯದ ಕಾರ್ಯನಿರ್ವಾಹ ಕಚೇರಿಯಲ್ಲಿ ಪಡೆದು ಜನವರಿ 20ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಿ ನೋಂದಾಸಿಕೊಳ್ಳಬೇಕಾಗಿದೆ.

ನೋಂದಾಯಿಸಿಕೊಂಡಿರುವ ವಧು-ವರರ ವಿವರಗಳನ್ನು ಜನವರಿ 23ರಂದು ದೇವಾಲಯದಲ್ಲಿ ಪ್ರಕಟಿಸಲಾಗುವುದು. ವಧು-ವರರ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ಜ. 25ರೊಳಗಾಗಿ ಸಲ್ಲಿಸಬೇಕಾಗಿದೆ. ಅಂತಿಮ ವಧು-ವರರ ಪಟ್ಟಿಯನ್ನ ಜ.27ರಂದು ಪ್ರಕಟಿಸಲಾಗುವುದು ಎಂದು ದೇವಾಲಯದ ಕಾರ್ಯನಿರ್ವಾಹಕ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ 9590300410, 9241297450, 9980907997ನ್ನು ಸಂಪರ್ಕಿಸಬಹುದಾಗಿದೆ.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

47 minutes ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

7 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

8 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago