ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಿಎಂ ಬೊಮ್ಮಾಯಿ ಭೇಟಿ

ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಸಿಎಂ‌ ಬಸವರಾಜ ಬೊಮ್ಮಾಯಿ‌ ಕುಟುಂಬ ಸಮೇತ ಇಂದು ಭೇಟಿ ನೀಡಿದರು.

ಚುನಾವಣಾ ದಿನಾಂಕ ಘೋಷಣೆ ಹಿನ್ನೆಲೆ ಟೆಂಪಲ್ ರನ್ ಮಾಡುತ್ತಿರುವ ಸಿಎಂ ಬೊಮ್ಮಾಯಿ‌. ದೇವರ ದರ್ಶನ ಪಡೆದು ವಿಶೇಷ ಪೂಜೆ ಪುರಸ್ಕಾರ ನೆರವೇರಿಸಿದರು.

ದೇವರ ದರ್ಶನ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಬಿಡುವು ಸಿಕ್ಕಾಗಲೆಲ್ಲಾ ಘಾಟಿ ಕ್ಷೇತ್ರಕ್ಕೆ ಬಂದು ಸ್ವಾಮಿ ದರ್ಶನ ಪಡೆಯುತ್ತಿರುತ್ತೇನೆ. ಸಮಸ್ತ ನಾಡಿಗೆ‌ ಒಳಿತಾಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು.

ವರುಣಾದಲ್ಲಿ ಪ್ರಬಲವಾದ ಪೈಪೋಟಿ ನೀಡಲಿದ್ದೇವೆ, ಅದರಂತೆ ಅಲ್ಲಿ ವಿಜೇಂದ್ರ ಅವರು ಸ್ಪರ್ಧೆ ಮಾಡಬೇಕು ಎಂದು ಜನರ ಅಭಿಪ್ರಾಯ ಕೇಳಿಬರುತ್ತಿದೆ ಈ ಕುರಿತಾಗಿ ಮಾಜಿ ಸಿಎಂ ಯಡಿಯೂರಪ್ಪ ಅಂತಿಮ‌ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಹಲವು ಸಮೀಕ್ಷೆಗಳ ಪ್ರಕಾರ ನಾವೇ ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ಮಾತಿಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ನವರು ಹಗಲು ಕನಸು ಕಾಣುತ್ತಿದ್ದಾರೆ
ಈ‌ ಸಮೀಕ್ಷೆಗಳು ಬಹಳ ಹಿಂದೆ ನಡೆದಿರುವುದು, ಚುನಾವಣೆ ಇನ್ನೂ ಒಂದೂವರೆ ತಿಂಗಳು‌ ಬಾಕಿ ಇದೆ. ಈಗ ನಡೆಯುತ್ತಿರುವ ಸಮೀಕ್ಷೆಗಳಲ್ಲಿ ಬಿಜೆಪಿ ಗೆಲ್ಲುವ ಅಂಶಗಳು ಕಂಡುಬರುತ್ತಿದೆ, ಚುನಾವಣೆಯಲ್ಲಿ ಬಿಜೆಪಿ‌ ಹೆಚ್ಚು ಬಹುಮತ ಪಡೆದು ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯುತ್ತೇವೆ ಎಂದು ತಿಳಿಸಿದರು.

ಮೀಸಲಾತಿ ಘೋಷಣೆ ಚುನಾವಣೆ ಗಿಮಿಕ್ ಎಂಬ ವಿರೋಧ ಪಕ್ಷಗಳ ಆರೋಪ ಹಿನ್ನೆಲೆ, ಅವರ ಸರ್ಕಾರದ ಅವಧಿಯಲ್ಲಿ ಮೀಸಲಾತಿ ಏಕೆ ಘೋಷಣೆ ಮಾಡಲಿಲ್ಲ..?
ಅವರು ಮಾಡದೇ ಇರುವ ಕೆಲಸವನ್ನು ನಾವು ಮಾಡಿ ತೋರಿಸಿದ್ದೇವೆ ಎಂದು ಸ್ಪಷ್ಟೀಕರಿಸಿದರು.

ಸಂಭಾವ್ಯ ಅಭ್ಯರ್ಥಿಗಳ ಅಭಿಪ್ರಾಯ ಸಂಗ್ರಹ ಸಭೆ ನಡೆಯುತ್ತಿರುವ ಬಗ್ಗೆ ಮಾತನಾಡಿ ತಳಮಟ್ಟದ ಕ್ಷೇತ್ರ ಮಟ್ಟದ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪಾರಾಮರ್ಶಿಸಿ ಸಂಸದೀಯ ಮಂಡಳಿಗೆ ಸಲ್ಲಿಸಲಾಗುವುದು ಎಂದರು.

ಅಭ್ಯರ್ಥಿಗಳ ಪಟ್ಟಿ ತಯಾರು ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಇನ್ನೊಂದು ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದರು

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

2 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

4 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

7 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

21 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago