ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಬಜೆಟ್ ಮಂಡನೆ ವೇಳೆ ಧಾರ್ಮಿಕ ದತ್ತಿಇಲಾಖೆ ಕುರಿತು ಮಾತನಾಡುವಾಗ ಈ ವಿಷಯ ಪ್ರಸ್ತಾಪಿಸಿದರು. ಅದೇ ರೀತಿ ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಣಾಸಿ ಮತ್ತು ಗುಡ್ಡಾಪುರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತಿದೆ.
ತಿರುಮಲದಲ್ಲಿ 200 ಕೋಟಿ ರೂ.ಗಳ ಕಾಮಗಾರಿ ಅಂತಿಮ ಹಂತದಲ್ಲಿದೆ. ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಮತ್ತು ಗುಡ್ಡಾಪುರದಲ್ಲಿ 11 ಕೋಟಿ ರೂ. ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ಸಾಲಿನಲ್ಲಿ ವಾರಣಾಸಿಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್-ಕಂ-ಬ್ಯಾರೇಜ್ ಅನ್ನು ಲೋಕೋಪಯೋಗಿ ಇಲಾಖೆ ವತಿಯಿಂದ 158 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಯಾವುದೇ ಆದಾಯವಿಲ್ಲದ 34,165 ʻಸಿʼ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಮಾಜದ ಗಣ್ಯರು ಮತ್ತು ಸಂಬಂಧಪಟ್ಟ ಇಲಾಖೆಗಳ ಪ್ರತಿನಿಧಿಗಳನ್ನೊಳಗೊಂಡ Vision Group ರಚಿಸಲಾಗುವುದು ಎಂದರು.
ಇನಾಂ/ಇನಾಂಯೇತರ ಜಮೀನು ಕಳೆದುಕೊಂಡಂತಹ 29,523 ʻಸಿʼ ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಇನ್ನು ಮುಂದೆ ತಸ್ತಿಕ್ ಮೊತ್ತವನ್ನು ಅರ್ಚಕರುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಪ್ರಸ್ತಾಪಿಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…