ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಬಜೆಟ್ ಮಂಡನೆ ವೇಳೆ ಧಾರ್ಮಿಕ ದತ್ತಿಇಲಾಖೆ ಕುರಿತು ಮಾತನಾಡುವಾಗ ಈ ವಿಷಯ ಪ್ರಸ್ತಾಪಿಸಿದರು. ಅದೇ ರೀತಿ ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಣಾಸಿ ಮತ್ತು ಗುಡ್ಡಾಪುರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತಿದೆ.
ತಿರುಮಲದಲ್ಲಿ 200 ಕೋಟಿ ರೂ.ಗಳ ಕಾಮಗಾರಿ ಅಂತಿಮ ಹಂತದಲ್ಲಿದೆ. ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಮತ್ತು ಗುಡ್ಡಾಪುರದಲ್ಲಿ 11 ಕೋಟಿ ರೂ. ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ಸಾಲಿನಲ್ಲಿ ವಾರಣಾಸಿಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್-ಕಂ-ಬ್ಯಾರೇಜ್ ಅನ್ನು ಲೋಕೋಪಯೋಗಿ ಇಲಾಖೆ ವತಿಯಿಂದ 158 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಯಾವುದೇ ಆದಾಯವಿಲ್ಲದ 34,165 ʻಸಿʼ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಮಾಜದ ಗಣ್ಯರು ಮತ್ತು ಸಂಬಂಧಪಟ್ಟ ಇಲಾಖೆಗಳ ಪ್ರತಿನಿಧಿಗಳನ್ನೊಳಗೊಂಡ Vision Group ರಚಿಸಲಾಗುವುದು ಎಂದರು.
ಇನಾಂ/ಇನಾಂಯೇತರ ಜಮೀನು ಕಳೆದುಕೊಂಡಂತಹ 29,523 ʻಸಿʼ ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಇನ್ನು ಮುಂದೆ ತಸ್ತಿಕ್ ಮೊತ್ತವನ್ನು ಅರ್ಚಕರುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಪ್ರಸ್ತಾಪಿಸಿದ್ದಾರೆ.
ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್ಗಳಲ್ಲಿ ವಿದ್ಯುತ್…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…