ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಬಜೆಟ್ ಮಂಡನೆ ವೇಳೆ ಧಾರ್ಮಿಕ ದತ್ತಿಇಲಾಖೆ ಕುರಿತು ಮಾತನಾಡುವಾಗ ಈ ವಿಷಯ ಪ್ರಸ್ತಾಪಿಸಿದರು. ಅದೇ ರೀತಿ ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಣಾಸಿ ಮತ್ತು ಗುಡ್ಡಾಪುರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತಿದೆ.
ತಿರುಮಲದಲ್ಲಿ 200 ಕೋಟಿ ರೂ.ಗಳ ಕಾಮಗಾರಿ ಅಂತಿಮ ಹಂತದಲ್ಲಿದೆ. ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಮತ್ತು ಗುಡ್ಡಾಪುರದಲ್ಲಿ 11 ಕೋಟಿ ರೂ. ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ಸಾಲಿನಲ್ಲಿ ವಾರಣಾಸಿಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್-ಕಂ-ಬ್ಯಾರೇಜ್ ಅನ್ನು ಲೋಕೋಪಯೋಗಿ ಇಲಾಖೆ ವತಿಯಿಂದ 158 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಯಾವುದೇ ಆದಾಯವಿಲ್ಲದ 34,165 ʻಸಿʼ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಮಾಜದ ಗಣ್ಯರು ಮತ್ತು ಸಂಬಂಧಪಟ್ಟ ಇಲಾಖೆಗಳ ಪ್ರತಿನಿಧಿಗಳನ್ನೊಳಗೊಂಡ Vision Group ರಚಿಸಲಾಗುವುದು ಎಂದರು.
ಇನಾಂ/ಇನಾಂಯೇತರ ಜಮೀನು ಕಳೆದುಕೊಂಡಂತಹ 29,523 ʻಸಿʼ ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಇನ್ನು ಮುಂದೆ ತಸ್ತಿಕ್ ಮೊತ್ತವನ್ನು ಅರ್ಚಕರುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಪ್ರಸ್ತಾಪಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…