ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಬಜೆಟ್ ಮಂಡನೆ ವೇಳೆ ಧಾರ್ಮಿಕ ದತ್ತಿಇಲಾಖೆ ಕುರಿತು ಮಾತನಾಡುವಾಗ ಈ ವಿಷಯ ಪ್ರಸ್ತಾಪಿಸಿದರು. ಅದೇ ರೀತಿ ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಣಾಸಿ ಮತ್ತು ಗುಡ್ಡಾಪುರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತಿದೆ.
ತಿರುಮಲದಲ್ಲಿ 200 ಕೋಟಿ ರೂ.ಗಳ ಕಾಮಗಾರಿ ಅಂತಿಮ ಹಂತದಲ್ಲಿದೆ. ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಮತ್ತು ಗುಡ್ಡಾಪುರದಲ್ಲಿ 11 ಕೋಟಿ ರೂ. ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ಸಾಲಿನಲ್ಲಿ ವಾರಣಾಸಿಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್-ಕಂ-ಬ್ಯಾರೇಜ್ ಅನ್ನು ಲೋಕೋಪಯೋಗಿ ಇಲಾಖೆ ವತಿಯಿಂದ 158 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಯಾವುದೇ ಆದಾಯವಿಲ್ಲದ 34,165 ʻಸಿʼ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಮಾಜದ ಗಣ್ಯರು ಮತ್ತು ಸಂಬಂಧಪಟ್ಟ ಇಲಾಖೆಗಳ ಪ್ರತಿನಿಧಿಗಳನ್ನೊಳಗೊಂಡ Vision Group ರಚಿಸಲಾಗುವುದು ಎಂದರು.
ಇನಾಂ/ಇನಾಂಯೇತರ ಜಮೀನು ಕಳೆದುಕೊಂಡಂತಹ 29,523 ʻಸಿʼ ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಇನ್ನು ಮುಂದೆ ತಸ್ತಿಕ್ ಮೊತ್ತವನ್ನು ಅರ್ಚಕರುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಪ್ರಸ್ತಾಪಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…