ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಿ.ಎನ್ ರಂಗಪ್ಪಗೆ ಲಭಿಸಿದ ಗೌರವ ಡಾಕ್ಟರೇಟ್ ಪ್ರಶಸ್ತಿ (ಗೌರವ ಪ್ರಶಸ್ತಿ)

ಚೆನ್ನೈನ ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿ (GHPU)ಯಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ(ಗೌರವ ಪ್ರಶಸ್ತಿ)ಯನ್ನು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಿ.ಎನ್ ರಂಗಪ್ಪನವರು ಪಡೆದಿದ್ದಾರೆ.

ಜಿ.ಎನ್ ರಂಗಪ್ಪನವರು ಮಾಡಿದಂತಹ ಸಮಾಜ ಸೇವೆ, ರಾಜಕೀಯ ಕ್ಷೇತ್ರದಲ್ಲಿ ಗಣನೀಯ ಸಾಧನೆ, ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಸೇರಿದಂತೆ ಇತರೆ ದೇವಸ್ಥಾನಗಳ ಅಭಿವೃದ್ಧಿ ಕಾರ್ಯ ಸಾಧನೆ ಹಾಗೂ ಇನ್ನಿತರೆ ಸಾಧನೆಗಳನ್ನು ಗುರುತಿಸಿ ಈ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಪ್ರಶಸ್ತಿ ಪುರಸ್ಕೃತ ಜಿ.ಎನ್ ರಂಗಪ್ಪ ಮಾತನಾಡಿ, ನಾನು ಗೌರವ ಡಾಕ್ಟರೇಟ್ ಪ್ರಶಸ್ತಿ(ಗೌರವ ಪ್ರಶಸ್ತಿ) ಪಡೆದಿರುವುದಕ್ಕೆ ಸಂತಸ ತಂದಿದೆ. ನಾನು ಮಾಡಿದಂತಹ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಇದಕ್ಕೆ ಸಹಕರಿಸಿದ ನನ್ನ ಹಿತೈಶಿಗಳು ಸೇರಿದಂತೆ ಎಲ್ಲರಿಗೂ ವಂದನೆಗಳನ್ನು ತಿಳಿಸುತ್ತೇನೆ. ನನ್ನ ಈ ಸಮಾಜ ಸೇವೆಯನ್ನು ಮುಂದುವರಿಸುತ್ತೇನೆ ಎಂದರು.

ನಂತರ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ವಿ.ಮಹೇಶ್ ಕುಮಾರ್ ಮಾತನಾಡಿ, ಜಿ.ಎನ್ ರಂಗಪ್ಪನವರು ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಭಾಗದಲ್ಲಿ ರಾಜಕೀಯವಾಗಿ ಸಕ್ರಿಯರಾಗಿದ್ದಾರೆ. ಇವರು ರಾಜಕೀಯ, ಸಮಾಜ ಸೇವೆ, ದೇವಾಲಯಗಳ ಅಭಿವೃದ್ಧಿ ಸೇರಿದಂತೆ ಇನ್ನಿತರೆ ಕೈಂಕರ್ಯಗಳನ್ನು ಮಾಡುತ್ತಾ ಬಂದಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಚೆನ್ನೈನ ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿ (GHPU)ಯು ಗೌರವ ಡಾಕ್ಟರೇಟ್ ಪ್ರಶಸ್ತಿ(ಗೌರವ ಪ್ರಶಸ್ತಿ)ಯನ್ನು ನೀಡಿ ಗೌರವಿಸಿರುವುದು‌ ಬಹಳ ಸಂತಸ ತಂದಿದೆ. ಇವರು ಮುಂದೆಯು ಸಮಾಜ ಸೇವೆಯನ್ನು ಮುಂದುವರಿಸಬೇಕೆಂದು‌ ಕೋರುತ್ತೇನೆ‌ ಎಂದರು.

ಈ ಪ್ರಶಸ್ತಿಯನ್ನು ಪಡೆಯಲು ಜಿ.ಎನ್ ರಂಗಪ್ಪನವರು ಅರ್ಹರಿದ್ದಾರೆ. ಸಮಾಜ ಸೇವೆಯ ಜೊತೆಗೆ‌ ಪ್ರಾಣಿಪಕ್ಷಿಗಳ ಸೇವೆಯನ್ನು ಮಾಡುತ್ತಿದ್ದಾರೆ. ಊರುಗಳಲ್ಲಿ ಸ್ವಚ್ಛತೆ ಕಾಪಾಡುವುದು, ಜನರ ಆರೋಗ್ಯದ ಕಾಳಜಿ ವಹಿಸುವುದು, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ. ಆದ್ದರಿಂದ ಇವರ ಈ ಸಾಧನೆಗಳಿಗಾಗಿ ಇನ್ನಷ್ಟು ಪ್ರಸ್ತಿಗಳು‌ ಲಭಿಸಲಿ ಎಂದು ಕೋರಿದರು.

ಈ ವೇಳೆ ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಭೂ ಮಂಜೂರಾತಿ‌ ಸಮಿತಿ ಸದಸ್ಯ ಗಂಗಸಂದ್ರ ಜಿ.ಕೆ.ಶ್ರೀಧರ್, ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರ.ಕಾ ಶಿವಕುಮಾರ್ ಆರ್.ವಿ, ತಾಲೂಕಿನ ಕೃಷಿಕ ಸಮಾಜದ ಅಧ್ಯಕ್ಷ ಮುರುಳಿಧರ್.ಆರ್ ಸೇರಿದಂತೆ ಇತರರು ಅಭಿನಂದಿಸಿದ್ದಾರೆ.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

14 minutes ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

4 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

4 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

6 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

8 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

20 hours ago