ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಒಳಾಂಗಣ ದುರಸ್ತಿ ಕಾರ್ಯ ಬರದಿಂದ ಸಾಗುತ್ತಿದೆ.
ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆ ಆದ ನಂತರ ಮೊದಲ ಬಾರಿಗೆ ದೇವಾಲಯದ ಒಳಾಂಗಣ ಭಾಗದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ದೇವಾಲಯ ಹಾಗೂ ಭಕ್ತಾಧಿಗಳ ಸಹಕಾರದಿಂದ ದುರಸ್ತಿ ಕಾರ್ಯ ನಡೆಯುತ್ತಿದೆ. ಮುಂಬರುವ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಜಿ.ಎನ್ ರಂಗಪ್ಪ ತಿಳಿಸಿದರು.
ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಡುತ್ತದೆ. ಭಕ್ತಾಧಿಗಳ ಅನುಕೂಲಕ್ಕೆ ತಕ್ಕಂತೆ ದೇವಾಲಯವನ್ನು ಕಾಲಕ್ಕೆ ತಕ್ಕಂತೆ ಅಭಿವೃದ್ಧಿಪಡಿಸಲಾಗುವುದು.
ಘಾಟಿ ದೇವಾಲಯವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಮಾದರಿ ಅಭಿವೃದ್ಧಿಪಡಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸಚಿವ ಕೆ.ಎಚ್ ಮುನಿಯಪ್ಪನವರ ಆಸೆ. ಅದರಂತೆ ದೇವಾಲಯಕ್ಕೆ ಸಂಬಂಧಪಟ್ಟ ಒಂದೊಂದೇ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದರು.
ಕ್ಯೂ ನಿಲ್ಲುವ ಸಂಕಿರಣ, ದಾಸೋಹ ಭವನ ನಿರ್ಮಿಸಲು ಪ್ಲ್ಯಾನ್ ಮಾಡಲಾಗಿದೆ. ಅದನ್ನು ಆದಷ್ಟು ಬೇಗ ಕಾಮಗಾರಿ ನಡೆಸಲಾಗುವುದು ಎಂದು ಹೇಳಿದರು.
ಘಾಟಿ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ದೇವಾಲಯದ ಸುತ್ತಾಮುತ್ತ ಪ್ಲಾಸ್ಟಿಕ್ ನಿಷೇಧ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಭಕ್ತಾಧಿಗಳು ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…