ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಒಳಾಂಗಣ ದುರಸ್ತಿ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಒಳಾಂಗಣ ದುರಸ್ತಿ ಕಾರ್ಯ ಬರದಿಂದ ಸಾಗುತ್ತಿದೆ.

ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆ ಆದ ನಂತರ ಮೊದಲ ಬಾರಿಗೆ ದೇವಾಲಯದ ಒಳಾಂಗಣ ಭಾಗದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ದೇವಾಲಯ ಹಾಗೂ ಭಕ್ತಾಧಿಗಳ ಸಹಕಾರದಿಂದ ದುರಸ್ತಿ ಕಾರ್ಯ ನಡೆಯುತ್ತಿದೆ.‌ ಮುಂಬರುವ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಜಿ.ಎನ್ ರಂಗಪ್ಪ ತಿಳಿಸಿದರು.

ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಡುತ್ತದೆ. ಭಕ್ತಾಧಿಗಳ ಅನುಕೂಲಕ್ಕೆ ತಕ್ಕಂತೆ ದೇವಾಲಯವನ್ನು ಕಾಲಕ್ಕೆ ತಕ್ಕಂತೆ ಅಭಿವೃದ್ಧಿಪಡಿಸಲಾಗುವುದು.

ಘಾಟಿ ದೇವಾಲಯವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಮಾದರಿ ಅಭಿವೃದ್ಧಿಪಡಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸಚಿವ ಕೆ.ಎಚ್ ಮುನಿಯಪ್ಪನವರ ಆಸೆ. ಅದರಂತೆ ದೇವಾಲಯಕ್ಕೆ ಸಂಬಂಧಪಟ್ಟ ಒಂದೊಂದೇ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದರು.

ಕ್ಯೂ ನಿಲ್ಲುವ ಸಂಕಿರಣ, ದಾಸೋಹ ಭವನ ನಿರ್ಮಿಸಲು ಪ್ಲ್ಯಾನ್ ಮಾಡಲಾಗಿದೆ. ಅದನ್ನು ಆದಷ್ಟು ಬೇಗ ಕಾಮಗಾರಿ ನಡೆಸಲಾಗುವುದು ಎಂದು ಹೇಳಿದರು.

ಘಾಟಿ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ದೇವಾಲಯದ ಸುತ್ತಾಮುತ್ತ ಪ್ಲಾಸ್ಟಿಕ್ ನಿಷೇಧ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಭಕ್ತಾಧಿಗಳು ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

2 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

14 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

14 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

15 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

18 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago