ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಒಳಾಂಗಣ ದುರಸ್ತಿ ಕಾರ್ಯ ಬರದಿಂದ ಸಾಗುತ್ತಿದೆ.
ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆ ಆದ ನಂತರ ಮೊದಲ ಬಾರಿಗೆ ದೇವಾಲಯದ ಒಳಾಂಗಣ ಭಾಗದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ದೇವಾಲಯ ಹಾಗೂ ಭಕ್ತಾಧಿಗಳ ಸಹಕಾರದಿಂದ ದುರಸ್ತಿ ಕಾರ್ಯ ನಡೆಯುತ್ತಿದೆ. ಮುಂಬರುವ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಜಿ.ಎನ್ ರಂಗಪ್ಪ ತಿಳಿಸಿದರು.
ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಡುತ್ತದೆ. ಭಕ್ತಾಧಿಗಳ ಅನುಕೂಲಕ್ಕೆ ತಕ್ಕಂತೆ ದೇವಾಲಯವನ್ನು ಕಾಲಕ್ಕೆ ತಕ್ಕಂತೆ ಅಭಿವೃದ್ಧಿಪಡಿಸಲಾಗುವುದು.
ಘಾಟಿ ದೇವಾಲಯವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಮಾದರಿ ಅಭಿವೃದ್ಧಿಪಡಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸಚಿವ ಕೆ.ಎಚ್ ಮುನಿಯಪ್ಪನವರ ಆಸೆ. ಅದರಂತೆ ದೇವಾಲಯಕ್ಕೆ ಸಂಬಂಧಪಟ್ಟ ಒಂದೊಂದೇ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದರು.
ಕ್ಯೂ ನಿಲ್ಲುವ ಸಂಕಿರಣ, ದಾಸೋಹ ಭವನ ನಿರ್ಮಿಸಲು ಪ್ಲ್ಯಾನ್ ಮಾಡಲಾಗಿದೆ. ಅದನ್ನು ಆದಷ್ಟು ಬೇಗ ಕಾಮಗಾರಿ ನಡೆಸಲಾಗುವುದು ಎಂದು ಹೇಳಿದರು.
ಘಾಟಿ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ದೇವಾಲಯದ ಸುತ್ತಾಮುತ್ತ ಪ್ಲಾಸ್ಟಿಕ್ ನಿಷೇಧ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಭಕ್ತಾಧಿಗಳು ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…