ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ‘ಮಾಂಗಲ್ಯ ಭಾಗ್ಯ’ ಎಂಬ ಯೋಜನೆಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನ ಇಂದು(ಜ. 31) ಬೆಳಗ್ಗೆ 11:20 ರಿಂದ 12:20ರವರೆಗೆ ಸಲ್ಲುವ ಅಭಿಜಿನ್ ಲಗ್ನದಲ್ಲಿ ಹಿಂದು ಸಂಪ್ರದಾಯದಂತೆ, ಪೌರೋಹಿತರ ವೇದ ಮಂತ್ರ ಘೋಷ ದೊಂದಿಗೆ ವಿವಾಹವಾಗಿ ಹೊಸ ಬಾಳಿಗೆ ಒಟ್ಟು 13 ಜೋಡಿಗಳು ಕಾಲಿರಿಸಿದರು.
‘ಮಾಂಗಲ್ಯ ಭಾಗ್ಯ’ ಶುಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5 ಸಾವಿರ ಹಾಗೂ ವಧುವಿಗೆ 10 ಸಾವಿರ ಸೇರಿದಂತೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ಹೀಗೆ ಒಟ್ಟು 55 ಸಾವಿರ ರೂ. ಗಳನ್ನ ದೇವಾಲಯದ ವತಿಯಿಂದ ಭರಿಸಲಾಗಿತ್ತು.
ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಸಹ ದೇವಾಲಯ ವತಿಯಿಂದ ಮಾಡಲಾಗಿತ್ತು.
ಈ ವೇಳೆ ದೇವಾಲಯದ ಆಡಳಿತಾಧಿಕಾರಿ ಡಿ.ನಾಗರಾಜ್, ಮುಜರಾಯಿ ತಹಶೀಲ್ದಾರ್ ಜೆ.ಜೆ.ಹೇಮಾವತಿ, ನಂಜಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.