ಶ್ರೀ ಘಾಟಿ‌ ಸುಬ್ರಹ್ಮಣ್ಯ ದೇವಾಲಯದಲ್ಲಿ ಶಾಸ್ತ್ರೋಕ್ತವಾಗಿ ನಡೆದ ‘ಮಾಂಗಲ್ಯ‌ ಭಾಗ್ಯ’: ದಾಂಪತ್ಯ ಜೀವನಕ್ಕೆ ಕಾಲಿಟ್ಟ13 ಜೋಡಿಗಳು

ಕರ್ನಾಟಕ ಸರ್ಕಾರ ಧಾರ್ಮಿಕ‌ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ತಾಲೂಕಿನ‌ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ‌ ದೇವಸ್ಥಾನದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ‘ಮಾಂಗಲ್ಯ ಭಾಗ್ಯ’ ಎಂಬ ಯೋಜನೆಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನ ಇಂದು(ಜ. 31) ಬೆಳಗ್ಗೆ 11:20 ರಿಂದ 12:20ರವರೆಗೆ ಸಲ್ಲುವ ಅಭಿಜಿನ್ ಲಗ್ನದಲ್ಲಿ ಹಿಂದು ಸಂಪ್ರದಾಯದಂತೆ, ಪೌರೋಹಿತರ ವೇದ ಮಂತ್ರ ಘೋಷ ದೊಂದಿಗೆ ವಿವಾಹವಾಗಿ ಹೊಸ ಬಾಳಿಗೆ ಒಟ್ಟು 13 ಜೋಡಿಗಳು ಕಾಲಿರಿಸಿದರು.

‘ಮಾಂಗಲ್ಯ ಭಾಗ್ಯ’ ಶುಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ‌ 5 ಸಾವಿರ‌ ಹಾಗೂ ವಧುವಿಗೆ 10 ಸಾವಿರ ಸೇರಿದಂತೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು‌ ಹೀಗೆ ಒಟ್ಟು 55 ಸಾವಿರ ರೂ. ಗಳನ್ನ ದೇವಾಲಯದ ವತಿಯಿಂದ ಭರಿಸಲಾಗಿತ್ತು.

ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಸಹ ದೇವಾಲಯ ವತಿಯಿಂದ ಮಾಡಲಾಗಿತ್ತು.

ಈ ವೇಳೆ ದೇವಾಲಯದ ಆಡಳಿತಾಧಿಕಾರಿ ಡಿ.ನಾಗರಾಜ್, ಮುಜರಾಯಿ ತಹಶೀಲ್ದಾರ್ ಜೆ.ಜೆ.ಹೇಮಾವತಿ, ನಂಜಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

5 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

21 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

22 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago