ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ‘ಮಾಂಗಲ್ಯ ಭಾಗ್ಯ’ ಎಂಬ ಯೋಜನೆಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನ ಇಂದು(ಜ. 31) ಬೆಳಗ್ಗೆ 11:20 ರಿಂದ 12:20ರವರೆಗೆ ಸಲ್ಲುವ ಅಭಿಜಿನ್ ಲಗ್ನದಲ್ಲಿ ಆಯೋಜಿಸಲಾಗಿದೆ.
ಮಾಂಗಲ್ಯ ಧಾರಣೆ ಕಾರ್ಯಕ್ರಮದಲ್ಲಿ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಒಟ್ಟು 13 ಜೋಡಿಗಳು ನೋಂದಣಿ ಮಾಡಿಕೊಂಡಿದ್ದಾರೆ.
‘ಮಾಂಗಲ್ಯ ಭಾಗ್ಯ’ ಶುಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5 ಸಾವಿರ ಹಾಗೂ ವಧುವಿಗೆ 10 ಸಾವಿರ ಸೇರಿದಂತೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ಹೀಗೆ ಒಟ್ಟು 55 ಸಾವಿರ ರೂ. ಗಳನ್ನ ದೇವಾಲಯದ ವತಿಯಿಂದ ಭರಿಸಲಾಗುವುದು.
ಅದೇರೀತಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಸಹ ದೇವಾಲಯ ವತಿಯಿಂದ ಮಾಡಲಾಗುವುದು ಎಂದು ದೇವಾಲಯದ ಕಾರ್ಯನಿರ್ವಾಹಕ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ 9590300410, 9241297450, 9980907997ನ್ನು ಸಂಪರ್ಕಿಸಬಹುದಾಗಿದೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…