ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ‘ಮಾಂಗಲ್ಯ ಭಾಗ್ಯ’ ಎಂಬ ಯೋಜನೆಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನ ಇಂದು(ಜ. 31) ಬೆಳಗ್ಗೆ 11:20 ರಿಂದ 12:20ರವರೆಗೆ ಸಲ್ಲುವ ಅಭಿಜಿನ್ ಲಗ್ನದಲ್ಲಿ ಆಯೋಜಿಸಲಾಗಿದೆ.
ಮಾಂಗಲ್ಯ ಧಾರಣೆ ಕಾರ್ಯಕ್ರಮದಲ್ಲಿ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಒಟ್ಟು 13 ಜೋಡಿಗಳು ನೋಂದಣಿ ಮಾಡಿಕೊಂಡಿದ್ದಾರೆ.
‘ಮಾಂಗಲ್ಯ ಭಾಗ್ಯ’ ಶುಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5 ಸಾವಿರ ಹಾಗೂ ವಧುವಿಗೆ 10 ಸಾವಿರ ಸೇರಿದಂತೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ಹೀಗೆ ಒಟ್ಟು 55 ಸಾವಿರ ರೂ. ಗಳನ್ನ ದೇವಾಲಯದ ವತಿಯಿಂದ ಭರಿಸಲಾಗುವುದು.
ಅದೇರೀತಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಸಹ ದೇವಾಲಯ ವತಿಯಿಂದ ಮಾಡಲಾಗುವುದು ಎಂದು ದೇವಾಲಯದ ಕಾರ್ಯನಿರ್ವಾಹಕ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ 9590300410, 9241297450, 9980907997ನ್ನು ಸಂಪರ್ಕಿಸಬಹುದಾಗಿದೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…