ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ

ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ ಶ್ರೀ ಕ್ರೋಧಿನಾಮ ಸಂವತ್ಸರದ ಪುಷ್ಯ ಶುದ್ಧ ಷಷ್ಠಿ ಜ.5ರ ಭಾನುವಾರ ಮಧ್ಯಾಹ್ನ 12-10 ರಿಂದ 12-20 ಗಂಟೆಗೆ ಸಲ್ಲುವ ಶುಭ (ಮೀನ) ಲಗ್ನದಲ್ಲಿ ಅಭಿಜಿನ್ ಮುಹೂರ್ತದಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನೆರವೇರಿತು.

ಸ್ವಾಮಿಯ ಬ್ರಹ್ಮರಥೋತ್ಸವ ದಿನದಂದು ರಥಕ್ಕೆ ಬ್ರಹ್ಮ, ವಿಷ್ಣು, ಶಿವ ಹೆಸರಿನಲ್ಲಿ ಪೂಜೆ ಮಾಡಿ, ರಥದ ನಾಲ್ಕು ಚಕ್ರಗಳಿಗೆ ಋಗ್ವೇದ, ಸಾಮವೇದ, ಯರ್ಜುವೇದ, ಅಥರ್ವಣವೇದ ಪೂಜೆ ಮಾಡಲಾಯಿತು. ರಥವನ್ನು ಎಳೆಯುವ ಹಗ್ಗಕ್ಕೆ ವಾಸುಕಿ ಎಂಬ ಸರ್ಪವನ್ನು ಆರಾಧನೆ ಮಾಡಿ, ಮೇಲೆ ಪ್ರಧಾನ ದೇವರ ಕಳಸ ಇಡಲಾಯಿತು. ಇದಾದ ನಂತರ ಗರಡು ಪಕ್ಷಿ ಬಂದು ರಥದ ಸುತ್ತಾ ಮೂರು ಪ್ರದಕ್ಷಿಣೆ ಹಾಕಿದ ನಂತರ, ಅದೇ ಶುಭ ಗಳಿಗೆ ಎಂದು ನಂಬಿ ಮುಹೂರ್ತಕ್ಕೆ ಸರಿಯಾಗಿ ರಥವನ್ನು ಮುಂದಕ್ಕೆ ಎಳೆಯಲಾಯಿತು.

ನಾಗಾರಾಧನೆಗೆ ಪ್ರಸಿದ್ಧಿ‌ ಪಡೆದಿರುವ ತಾಲೂಕಿನ ಪುಣ್ಯಕ್ಷೇತ್ರ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ ಇಂದು ವಿಜೃಂಭಣೆಯಿಂದ ನಡೆಯಿತು. ಬ್ರಹ್ಮರಥೋತ್ಸವ ಕಣ್ತುಂಬಿಕೊಳ್ಳಲು ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಇತರೆ ರಾಜ್ಯಗಳ ನಾನಾ ಮೂಲೆಗಳಿಂದ ಭಕ್ತಾಧಿಗಳು ಸಾಗಾರೋಪಾದಿಯಲ್ಲಿ ಆಗಮಿಸಿದ್ದರು..

ಇಂದು ಮುಂಜಾನೆ ಸುಮಾರು 3 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಸುಬ್ರಹ್ಮಣ್ಯ ಹಾಗೂ ಲಕ್ಷ್ಮಿ ನರಸಿಂಹ‌ ಸ್ವಾಮಿಯ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ.

ಬ್ರಹ್ಮರಥೋತ್ಸವ ಹಿನ್ನೆಲೆ ದೇವರಿಗೆ ವಿವಿಧ ಪುಷ್ಪಗಳಿಂದ ಸಿಂಗರಿಸಿ, ನಾನಾ ರೀತಿ ಹೋಮ ಹವನ, ಪೂಜಾ ವಿಧಿ ವಿಧಾನಗಳು ಅದ್ಧೂರಿಯಾಗಿ, ವಿಜೃಂಭಣೆಯಿಂದ ನೆರವೇರಿಸಲಾಗುತ್ತು.

ಭಕ್ತಾಧಿಗಳು ಸರ್ಪದೋಷ ನಿವಾರಣೆಗಾಗಿ ಕ್ಷೇತ್ರದಲ್ಲಿರುವ ನಾಗರ ಕಲ್ಲು, ಹುತ್ತಗಳಿಗೆ ಹಾಲು, ತುಪ್ಪ ಎರೆದು, ಅರಿಶಿಣ ಕುಂಕುಮ ಹಚ್ಚಿ, ವಿಶೇಷ ಪೂಜೆ ಮಾಡುವಲ್ಲಿ ನಿರತರಾಗಿದ್ದರು.

ಬ್ರಹ್ಮರಥೋತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಜನ ಬರಲಿದ್ದಾರೆ. ಬ್ರಹ್ಮರಥೋತ್ಸವ ವೇಳೆ ಯಾವುದೇ ಅಪಘಾತ, ಅನಾಹುತ, ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಅದರಂತೆ ಭಕ್ತಾಧಿಗಳ ಸಂಚಾರಕ್ಕೆ ದೊಡ್ಡಬಳ್ಳಾಪುರ ಕೆಎಸ್ ಆರ್ ಟಿಸಿ ಘಟಕದ ವತಿಯಿಂದ ಸುಮಾರು 75 ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿತ್ತು.

ಜನಸಂದಣಿಯಲ್ಲಿ ಜನರ ಚಲನವಲನ ಗಮನಹರಿಸಲು ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ದೇವಸ್ಥಾನ ಸುತ್ತಾಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

ವಾಹನಗಳ ನಿಲುಗಡೆಗೆ ಮಾಕಳಿ ಕಡೆಯಿಂದ ಬರುವ ವಾಹನಗಳಿಗೆ ದೇವಸ್ಥಾನ ಹಿಂಭಾಗ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು. ಕಂಟನಕುಂಟೆ, ಹಾಡೋನಹಳ್ಳಿ ಮಾರ್ಗವಾಗಿ ಬರುವ ವಾಹನಗಳಿಗೆ ಲಘುಮೇನಹಳ್ಳಿ ಗೇಟ್ ಸಮೀಪ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು. ರಸ್ತೆ ಬದಿ ವಾಹನಗಳನ್ನು ಪಾರ್ಕಿಂಗ್ ಮಾಡಲು ಅನುಮತಿ ಇರುವುದಿಲ್ಲ.

ಜನಸಂದಣಿಯಲ್ಲಿ ತಲೆ ಸುತ್ತು, ಇತರೆ ತೊಂದರೆಗಳು ಉಂಟಾದರೆ ವೈದ್ಯಕೀಯ ಸೇವೆ ಕಲ್ಪಿಸಲು ದೇವಸ್ಥಾನ ಬಳಿ ವೈದ್ಯರ ತಂಡ ಇರಲಿದೆ‌. ಎರಡು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ, ವೈದ್ಯರ ತಂಡದೊಂದಿಗೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ ಮಾಡಲಾಗಿದೆ. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ಅವಕಾಶ ಮಾಡಲಾಗಿತ್ತು.

ಒಟ್ಟಿನಲ್ಲಿ ಘಾಟಿ ಬ್ರಹ್ಮರಥೋತ್ಸವ ಹಿನ್ನೆಲೆ ಕ್ಷೇತ್ರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿ ಸಂಭ್ರಮ, ಸಡಗರ ಮನೆ‌ ಮಾಡಿದೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

4 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

5 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

6 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

6 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

10 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

12 hours ago