ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಇಂದು(ಸೋಮವಾರ) ಹುಂಡಿ ಎಣಿಕೆ ಮಾಡಲಾಯಿತು.
ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.69ಲಕ್ಷ ಹಣ ಸಂಗ್ರಹವಾಗಿದೆ.
ಇದರೊಂದಿಗೆ 79200 ರೂ ಮೌಲ್ಯದ 01 ಕೆಜಿ 500 ಗ್ರಾಂ ಬೆಳ್ಳಿ, 3720 ರೂ ಮೌಲ್ಯದ 300 ಮಿಲಿ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.
ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಜಿ .ಜೆ. ಹೇಮಾವತಿ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜೆ.ಎನ್ .ರಂಗಪ್ಪ ಕೆ. ಎಸ್ .ರವಿ ,ಲಕ್ಷ್ಮ ನಾಯಕ್, ಮಹೇಶ್ ಕುಮಾರ್, ಹೇಮಲತಾ ರಮೇಶ್, ಹಾಗೂ ದೇವಾಲಯದ ಪ್ರಧಾನ ಅರ್ಚಕ. ಆರ್. ಸುಬ್ರಹ್ಮಣ್ಯ, ದೇವಾಲಯದ ಸಿಬ್ಬಂದಿ, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…