ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಎಣಿಕೆ

ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಇಂದು(ಶನಿವಾರ) ಹುಂಡಿ ಎಣಿಕೆ ಮಾಡಲಾಯಿತು. ಒಟ್ಟು 59,28,876 ರೂ. ಹಣ ಸಂಗ್ರಹವಾಗಿದೆ.

ಹಣದೊಂದಿಗೆ 63,000 ರೂ. ಮೌಲ್ಯದ 1 ಕೆಜಿ 400 ಗ್ರಾಂ ತೂಕದ ಬೆಳ್ಳಿ, 1 ಲಕ್ಷ 57 ಸಾವಿರ ರೂ. ಮೌಲ್ಯದ 19 ಗ್ರಾಂ 500 ಮಿಲಿ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.

ಹುಂಡಿ ಕಾಣಿಕೆ ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.

ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಜಿ .ಜೆ. ಹೇಮಾವತಿ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜೆ.ಎನ್ .ರಂಗಪ್ಪ ಕೆ. ಎಸ್ .ರವಿ ,ಲಕ್ಷ್ಮ ನಾಯಕ್, ಮಹೇಶ್ ಕುಮಾರ್, ಹೇಮಲತಾ ರಮೇಶ್, ಹಾಗೂ ದೇವಾಲಯದ ಪ್ರಧಾನ ಅರ್ಚಕ ಶ್ರೀನಿಧಿ, ದೇವಾಲಯದ ಸಿಬ್ಬಂದಿ, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

10 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

13 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

13 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago