ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಇಂದು(ಶನಿವಾರ) ಹುಂಡಿ ಎಣಿಕೆ ಮಾಡಲಾಯಿತು. ಒಟ್ಟು 59,28,876 ರೂ. ಹಣ ಸಂಗ್ರಹವಾಗಿದೆ.
ಹಣದೊಂದಿಗೆ 63,000 ರೂ. ಮೌಲ್ಯದ 1 ಕೆಜಿ 400 ಗ್ರಾಂ ತೂಕದ ಬೆಳ್ಳಿ, 1 ಲಕ್ಷ 57 ಸಾವಿರ ರೂ. ಮೌಲ್ಯದ 19 ಗ್ರಾಂ 500 ಮಿಲಿ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.
ಹುಂಡಿ ಕಾಣಿಕೆ ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಜಿ .ಜೆ. ಹೇಮಾವತಿ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜೆ.ಎನ್ .ರಂಗಪ್ಪ ಕೆ. ಎಸ್ .ರವಿ ,ಲಕ್ಷ್ಮ ನಾಯಕ್, ಮಹೇಶ್ ಕುಮಾರ್, ಹೇಮಲತಾ ರಮೇಶ್, ಹಾಗೂ ದೇವಾಲಯದ ಪ್ರಧಾನ ಅರ್ಚಕ ಶ್ರೀನಿಧಿ, ದೇವಾಲಯದ ಸಿಬ್ಬಂದಿ, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…