ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಇಂದು(ಶನಿವಾರ) ಹುಂಡಿ ಎಣಿಕೆ ಮಾಡಲಾಯಿತು. ಒಟ್ಟು 59,28,876 ರೂ. ಹಣ ಸಂಗ್ರಹವಾಗಿದೆ.
ಹಣದೊಂದಿಗೆ 63,000 ರೂ. ಮೌಲ್ಯದ 1 ಕೆಜಿ 400 ಗ್ರಾಂ ತೂಕದ ಬೆಳ್ಳಿ, 1 ಲಕ್ಷ 57 ಸಾವಿರ ರೂ. ಮೌಲ್ಯದ 19 ಗ್ರಾಂ 500 ಮಿಲಿ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.
ಹುಂಡಿ ಕಾಣಿಕೆ ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಜಿ .ಜೆ. ಹೇಮಾವತಿ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜೆ.ಎನ್ .ರಂಗಪ್ಪ ಕೆ. ಎಸ್ .ರವಿ ,ಲಕ್ಷ್ಮ ನಾಯಕ್, ಮಹೇಶ್ ಕುಮಾರ್, ಹೇಮಲತಾ ರಮೇಶ್, ಹಾಗೂ ದೇವಾಲಯದ ಪ್ರಧಾನ ಅರ್ಚಕ ಶ್ರೀನಿಧಿ, ದೇವಾಲಯದ ಸಿಬ್ಬಂದಿ, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…