ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ: ವೈಭವದ ಬ್ರಹ್ಮರಥೋತ್ಸವ ಕಣ್ತುಂಬಿಕೊಂಡು ಪುನೀತರಾದ ಭಕ್ತಸಾಗರ

ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ‌ ಸ್ವಾಮಿ ಬ್ರಹ್ಮರಥೋತ್ಸವವು ಭಕ್ತಮಹಾಗಣ ಸಮ್ಮುಖದಲ್ಲಿ ಇಂದು ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ಬಹಳ ವೈಭವದೊಂದಿಗೆ ನೆರವೇರಿತು.

ಮುಜರಾಯಿ ಇಲಾಖಾ ಸಚಿವ ರಾಮಲಿಂಗ ರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರು ರಥೋತ್ಸವಕ್ಕೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ರಥೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಭಕ್ತಗಣ ಸಾವಿರಾರು ಸಂಖ್ಯೆಯಲ್ಲಿ ಹರಿದು ಬಂದು, ರಥವನ್ನ ಎಳೆದು, ರಥಕ್ಕೆ ಬಾಳೆಹಣ್ಣು, ದವನ ಎಸೆದು ತಮ್ಮ ಭಕ್ತಿ ಇಚ್ಚಾನುಸಾರ ಸಮರ್ಪಿಸಿ ಪುನೀತರಾದರು.

ಷಷ್ಠಿಯ ದಿನದಂದು ಮುಂಜಾನೆ 3ರಿಂದ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ಆರಂಭವಾಗಲಿವೆ. ಅಭಿಷೇಕ ಕಾರ್ಯಗಳು ಪ್ರಾರಂಭಗೊಂಡು, 5:30ಕ್ಕೆ ಮಹಾಮಂಗಳಾರತಿ ನೆರವೇರಿತು. ಗರ್ಭಗುಡಿಯಲ್ಲಿನ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಲಕ್ಷ್ಮೀನರಸಿಂಹಸ್ವಾಮಿ ಮೂರ್ತಿಗಳಿಗೆ ಪ್ರಾತಃ ಕಾಲದಲ್ಲಿ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಶ್ರೀಗಂದಾಭಿಷೇಕ, ಭಸ್ಮದಭಿಷೇಕದೊಂದಿಗೆ ಹೂವಿನ ಅಲಂಕಾರ ನೆರವೇರಿಸಲಾಯಿತು. ರಾತ್ರಿ 8:30ರವರೆಗೂ ಭಕ್ತರಿಗೆ ದರ್ಶನ ವ್ಯವಸ್ಥೆ ದೊರೆಯಲಿದೆ.

ಭಕ್ತರಿಗೆ ಅನ್ನ ದಾಸೋಹ, ಮಜ್ಜಿಗೆ, ಪಾನಕದ ವ್ಯವಸ್ಥೆ ಮಾಡಲಾಗಿತ್ತು. ಜಾತ್ರೆಗೆ ಆಗಮಿಸುವ ಭಕ್ತರಿಗೆ ವಿಶೇಷ ಬಸ್‍ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಬ್ರಹ್ಮರಥೋತ್ಸವಕ್ಕೆ ಬರುವ ಸಹಸ್ರಾರು ಭಕ್ತಾಧಿಗಳಿಗೆ ಮೊಬೈಲ್‌ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಶುಧ್ಧ ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ವ್ಯವಸ್ಥೆ‌ ಮಾಡಲಾಗಿದೆ. ಚಿನ್ನಾಭರಣ ಕಳವು ಸೇರಿದಂತೆ ಯಾವು‌ದೇ‌ ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ದ್ರೋಣ್‌ ಕ್ಯಾಮೆರಾ ಮತ್ತು ದೇವಾಲಯದ ಸುತ್ತಾಮುತ್ತಾ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

ಪಾರ್ಕಿಂಗ್ ವ್ಯವಸ್ಥೆ

ಸಂಚಾರ ದಟ್ಟಣೆ ನಿಯಂತ್ರಿಸಲು ದೇವಾಲಯದಿಂದ 1 ಕಿ.ಮೀ ಅಂತರದಲ್ಲೇ 14 ಕಡೆ ಬೈಕ್, ಕಾರು, ಬಸ್‌ ಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗಿತ್ತು.

ಪೊಲೀಸ್ ಭದ್ರತೆ

ಘಾಟಿ ಬ್ರಹ್ಮರಥೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು, ಅಗತ್ಯವಿರುವ ಕಡೆ ಬ್ಯಾರಿಕೇಡ್ ವ್ಯವಸ್ಥೆ ಸಹ ವ್ಯವಸ್ಥೆ ಮಾಡಲಾಗಿತ್ತು.

ಸಾರಿಗೆ ವ್ಯವಸ್ಥೆ

ಜಾತ್ರಾ ಮಹೋತ್ಸವದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ವತಿಯಿಂದ ಘಾಟಿಯಿಂದ ದೊಡ್ಡಬಳ್ಳಾಪುರ, ಬೆಂಗಳೂರು, ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೋಲಾರ ಹಾಗೂ ಮುಂತಾದ ಸ್ಥಳಗಳಿಗೆ 84 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಅದೇರೀತಿ ‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳಾ ಪ್ರಯಾಣಿಕರು ಉಚಿತವಾಗಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಅವಕಾಶವನ್ನ ಸಹ ಕಲ್ಪಿಸಲಾಗಿತ್ತು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

5 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

10 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago